Advertisement

ಜಿ.ಟಿ.ದೇವೇಗೌಡರ ಮಾತುಗಳು ಸುಳ್ಳಾಗಲಿ : ಸಿದ್ದರಾಮಯ್ಯ

09:56 AM May 03, 2019 | Vishnu Das |

ಬೆಂಗಳೂರು : ಮೈಸೂರಿನಲ್ಲಿ ಜೆಡಿಎಸ್‌ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆ ಎನ್ನುವ ಸಚಿವ, ಜೆಡಿಎಸ್‌ ನಾಯಕ ಜಿ.ಟಿ.ದೇವೇಗೌಡರ ಹೇಳಿಕೆಗೆಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಸಚಿವ ಜಿ.ಟಿ.ದೇವೇಗೌಡರ ಹೇಳಿಕೆ ನನ್ನಲ್ಲಿಯೂ ಅಚ್ಚರಿ ಮೂಡಿಸಿದೆ. ದೇವೇಗೌಡರ ಮಾತುಗಳು ಸುಳ್ಳಾಗಲಿ ಎಂದು ಆಶಿಸುತ್ತೇನೆ, ಮೇ 23 ರ ಫಲಿತಾಂಶ‌ದಲ್ಲಿ ಈ ಹೇಳಿಕೆಯ ಸತ್ಯಾಸತ್ಯತೆ ಗೊತ್ತಾಗಲಿದೆ. ಮಿಂಚಿ ಹೋದ ಕಾರ್ಯಕ್ಕೆ ಚಿಂತಿಸಿ ಫಲ ಇಲ್ಲ. ಕಾದು ನೋಡೋಣ. ಎಂದು ಬರೆದಿದ್ದಾರೆ.

ಜಿಟಿಡಿ ಅವರ ಹೇಳಿಕೆ ಮೈತ್ರಿಯಲ್ಲಿ ಸಂಚಲನ ಮೂಡಿಸಿತ್ತು. ಬಿಜೆಪಿ ನಾಯಕರು ಜಿಟಿಡಿ ಹೇಳಿರುವುದು ನಿಜ ಎಂದಿದ್ದರು.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಟಿಡಿ ಅವರೆದುರು ಸಿದ್ದರಾಮಯ್ಯ ಭಾರಿ ಅಂತರದಲ್ಲಿ ಸೋತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next