Advertisement

ಸಿದ್ದರಾಮಯ್ಯ ಉಡಾಫೆ ಮಾತು ನಿಲ್ಲಿಸಲಿ: ಅಶ್ವಥ

04:06 PM Apr 21, 2019 | Team Udayavani |

ಯಲಬುರ್ಗಾ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರ ಬಗ್ಗೆ ಉಡಾಫೆಯಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಅಶ್ವಥ ನಾರಾಯಣ ಹೇಳಿದರು.

Advertisement

ಅವರು ತಾಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ ಶನಿವಾರ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಏರ್‌ ಸರ್ಜಿಕಲ್ ಸ್ಟ್ರೈಕ್‌ ಮೋದಿ ಮಾಡಿದ್ದಾರೆಯೇ ಎಂದು ಪ್ರಶ್ನಿಸುವ ಸಿದ್ದರಾಮಯ್ಯ ತಾವು ಸಿಎಂ ಆಗಿದ್ದಾಗ ಜಾರಿಗೆ ತಂದ ಯೋಜನೆಗಳಿಗೆ ತಮ್ಮ ಮನೆಯಿಂದ ಹಣ ನೀಡಿದ್ದಾರೆಯೇ. ಸೈನ್ಯಕ್ಕೆ ಕೇಂದ್ರ ಸರಕಾರ ಸ್ವಾತಂತ್ರ್ಯ ನೀಡಿದೆ. ಕೇಂದ್ರದ ಯಾವುದೇ ಸಚಿವರ ಮೇಲೆ ಭ್ರಷ್ಟಚಾರ ಆರೋಪಗಳಿಲ್ಲ. ದೇಶದ ಭದ್ರತೆಗೆ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದರು.

ಶಾಸಕ ಹಾಲಪ್ಪ ಆಚಾರ್‌ ಮಾತನಾಡಿ, ನರೇಂದ್ರ ಮೋದಿ ಅವರು ಭ್ರಷ್ಟಚಾರ ರಹಿತ ಆಡಳಿತ ನೀಡಿದ್ದಾರೆ. ಕೇಂದ್ರದ 126 ಯೋಜನೆಗಳು ಜನರ ಮನಸ್ಸಿನಲ್ಲಿವೆ. ರಾಜ್ಯ ಸಮ್ಮಿಶ್ರ ಸರಕಾರಕ್ಕೆ ಕಣ್ಣು, ಕಿವಿ ಇಲ್ಲ. ಸಂಸದ ಸಂಗಣ್ಣ ಕರಡಿ ಕೊಪ್ಪಳ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಬಿಜೆಪಿ ಅಭ್ಯರ್ಥಿ ಸಂಸದ ಸಂಗಣ್ಣ ಕರಡಿ ಮಾತನಾಡಿ, ಮತ್ತೂಮ್ಮೆ ಆರ್ಶೀವಾದ ಮಾಡಿ ಜಿಲ್ಲೆಯ ಅಭಿವೃದ್ಧಿಗೆ ಕೈ ಜೋಡಿಸುವಂತೆ ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next