Advertisement
ಸಿದ್ದು ಸ್ವಯಂಘೋಷಿತ ಅಹಿಂದ ನಾಯಕಕಲಬುರಗಿ: ರಾಜ್ಯದಲ್ಲಿ ಒಬ್ಬರು ಮಣ್ಣಿನ ಮಗ ಹಾಗೂ ಮತ್ತೂಬ್ಬರು ಅಹಿಂದ ನಾಯಕ ಎಂದು ಸ್ವಯಂ ಘೋಷಿತವಾಗಿ ಹೇಳಿಕೊಳ್ಳುತ್ತಿದ್ದಾರೆ. ಹಾಗಾದರೆ, ನಾವೇನು ಕಲ್ಲಿನ ಮಕ್ಕಳಾ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ.
Related Articles
ಎಚ್.ಡಿ.ಕುಮಾರಸ್ವಾಮಿ ಲಾಟರಿ ಹೊಡೆದಂತೆ ಮುಖ್ಯಮಂತ್ರಿ ಆಗಿದ್ದಾರೆ. ರೈತರ ಸಾಲಮನ್ನಾ ಬಗ್ಗೆ ಘೋಷಿಸಿದ್ದರೂ ಒಂದೇ ಒಂದು ರೂಪಾಯಿ ಮನ್ನಾ ಆಗಿಲ್ಲ. ರೈತರಿಗೆ ಬ್ಯಾಂಕ್ಗಳಿಂದ ನೋಟಿಸ್, ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗುತ್ತಿದೆ. ನೋಟಿಸ್ ಕೊಟ್ಟ ಬ್ಯಾಂಕ್ಗಳಿಗೆ ಬರೀ ಹುಷಾರ್ ಎಂದು ಎಚ್ಚರಿಕೆ ಕೊಡುವ ಮೂಲಕ ಕುಮಾರಸ್ವಾಮಿ ಕಾಗದದ ಹುಲಿಯಂತೆ ವರ್ತಿಸುತ್ತಿದ್ದಾರೆ ಎಂದರು. ಈ ಸರ್ಕಾರ ಬದುಕಿದೆಯೋ, ಇಲ್ಲವೋ ಎನ್ನುವುದನ್ನು ತೋರಿಸಲಿ ಎಂದು ಮೈತ್ರಿ ಸರ್ಕಾರಕ್ಕೆ ಸವಾಲು ಹಾಕಿದರು.
Advertisement
ಇತ್ತೀಚಿನ ಉಪ ಚುನಾವಣೆಯಲ್ಲಿ ಸೋಲಲು ಅತಿಯಾದ ಆತ್ಮವಿಶ್ವಾಸ, ಜತೆಗೆ ಪಕ್ಷ ಸಂಘಟನೆಯಲ್ಲಿ ಎಚ್ಚರ ತಪ್ಪಿದ್ದೇ ಕಾರಣ. ಸೋತ ಮಾತ್ರಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆ ಬರೋದಿಲ್ಲ. ಈಗಲೂ ಯಡಿಯೂರಪ್ಪನವರೇ ನಮ್ಮ ನಾಯಕ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ 24 ಕ್ಷೇತ್ರಗಳನ್ನು ಗೆಲ್ಲುತ್ತೇವೆ.– ಕೆ.ಎಸ್.ಈಶ್ವರಪ್ಪ, ಬಿಜೆಪಿ ನಾಯಕ. ಅಹಿಂದ ಡಿಗ್ರಿಯಲ್ಲ, ಈಶ್ವರಪ್ಪ ಪೆದ್ದ
ಗದಗ/ಚಿಕ್ಕಮಗಳೂರು: ಈಶ್ವರಪ್ಪ ಹೇಳಿಕೆಗೆ ಗದಗದಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಈಶ್ವರಪ್ಪ ಒಬ್ಬ ಮಹಾನ್ ಪೆದ್ದ. ತಲೆಯಲ್ಲಿ ಮಿದುಳಿಲ್ಲದ ಮನುಷ್ಯ. ಸಿದ್ದರಾಮಯ್ಯ ಸ್ವಯಂ ಘೋಷಿತ ಅಹಿಂದ ನಾಯಕ ಎಂದು ತಿಳಿವಳಿಕೆ ಇಲ್ಲದೇ ಮಾತನಾಡುತ್ತಾರೆ. ಅಹಿಂದ ನಾಯಕ ಎನ್ನುವುದಕ್ಕೆ ಯಾವುದಾದರೂ ವಿಶ್ವವಿದ್ಯಾಲಯದಿಂದ ಡಿಗ್ರಿ ನೀಡಲಾಗುತ್ತದೆಯೇ ಎಂದು ಟೀಕಿಸಿದರು. ಇದಕ್ಕೂ ಮೊದಲು ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ವಿರುದ್ಧ ಟೀಕಾಪ್ರಹಾರ ನಡೆಸಿದರು. ಜೆಡಿಎಸ್-ಕಾಂಗ್ರೆಸ್ ಇದೇ ರೀತಿ ಕಚ್ಚಾಡಿಕೊಂಡು ಸತ್ತರೆ ತಾವೇ ಮುಖ್ಯಮಂತ್ರಿ ಆಗುವುದಾಗಿ ಬಿಎಸ್ವೈ ಹೇಳಿದ್ದಾರೆ. ಪಾಪ ಅವರು ಇನ್ನೂ ಹಗಲುಗನಸು ಕಾಣುತ್ತಿದ್ದಾರೆ. ಅವರು ಮುಖ್ಯಮಂತ್ರಿ ಹೇಗೆ ಆಗುತ್ತಾರೆ. ಅವರಿಗೆ ಬಹುಮತವಿದೆಯೇ ಎಂದು ಪ್ರಶ್ನಿಸಿದರು. ಯಾವುದೇ ವ್ಯಕ್ತಿ ಒಂದು ವಿಚಾರವಾಗಿ ಬಹಳ ಆಸೆ ಪಟ್ಟರೆ ಅವರಿಗೆ ಈ ರೀತಿ ಆಗುತ್ತದೆ. ಯಡಿಯೂರಪ್ಪ ಕಣ್ಣು ಮುಚ್ಚಿದರೆ ಸಾಕು, ಅವರಿಗೆ ವಿಧಾನಸೌಧದ 3ನೇ ಮಹಡಿ ಕಣ್ಣಿಗೆ ಬೀಳುತ್ತದೆ. ಬಹುಮತಕ್ಕೆ 113 ಸ್ಥಾನ ಬೇಕು. ಅವರಿಗೆ ಸಿಕ್ಕಿರುವುದು 104 ಸ್ಥಾನ. ಅವರು ಹೇಗೆ ಮುಖ್ಯಮಂತ್ರಿಯಾಗುತ್ತಾರೆ. ನೀವು ಹೇಗೆ ಮುಖ್ಯಮಂತ್ರಿ ಆಗುತ್ತೀರಿ ಎಂದು ಅವರನ್ನು ಕೇಳಿ. ಅದನ್ನು ಬಿಟ್ಟು ನನ್ನನ್ನು ಕೇಳಿದರೆ ನಾನೇನು ಹೇಳಲಿ ಎಂದು ಪತ್ರಕರ್ತರನ್ನೇ ಪ್ರಶ್ನಿಸಿದರು. ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯತೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಸಮನ್ವಯತೆ ಇಲ್ಲದಿದ್ದರೆ ಉಪಚುನಾವಣೆಯಲ್ಲಿ 4 ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಿತ್ತೆ? ಬಳ್ಳಾರಿಯಲ್ಲಿ ದಾಖಲೆ ಮತಗಳ ಅಂತರದಲ್ಲಿ ಗೆದ್ದಿದ್ದೇವೆ. ಶಿವಮೊಗ್ಗದಲ್ಲಿ ಕಳೆದ ಚುನಾವಣೆಯಲ್ಲಿ ಯಡಿಯೂರಪ್ಪ ಮೂರೂವರೆ ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಈಗ ಆ ಅಂತರ 50 ಸಾವಿರಕ್ಕೆ ಇಳಿದಿದೆ. ಸಮನ್ವಯತೆ ಇಲ್ಲದಿದ್ದರೆ ಇಂತಹ ಫಲಿತಾಂಶ ಬರುತ್ತಿತ್ತೇ ಎಂದು ಪ್ರಶ್ನಿಸಿದರು. ಉಪಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಯನ್ನು ತಿರಸ್ಕರಿಸಲು ಜನರು ತೀರ್ಮಾನಿಸಿದ್ದಾರೆ ಎಂಬ ಸಂದೇಶ ರವಾನೆಯಾಗಿದೆ. ಮುಂಬರುವ ಲೋಕಸಭಾ ಚುನಾಣೆಯಲ್ಲಿ ರಾಜ್ಯದಲ್ಲಿ ಅತ್ಯ ಧಿಕ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದರು. ಬಿಜೆಪಿಯವರು ಸರ್ಕಾರ ಟೇಕಾಫ್ ಆಗಿಲ್ಲ, ಆಡಳಿತಾತ್ಮಕವಾಗಿ ಚುರುಕಾಗಿಲ್ಲ ಎಂದು ಆರೋಪಿಸುತ್ತಿದ್ದಾರೆ. ಬಿಜೆಪಿಯವರ ಹೇಳಿಕೆಗೆ ತಾಳ-ಮೇಳ ಇರುವುದಿಲ್ಲ. ಕೇವಲ ಆಧಾರರಹಿತ ಆರೋಪ ಮಾಡುತ್ತಾರೆ. ಸುಳ್ಳು ಹೇಳುತ್ತಾರೆ. ಅವರ ಮಾತಿಗೆ ಕಿಮ್ಮತ್ತಿಲ್ಲ.
– ಸಿದ್ದರಾಮಯ್ಯ, ಮಾಜಿ ಸಿಎಂ.