Advertisement

ಆರ್ ಎಸ್ ಎಸ್ ಬಗ್ಗೆ ಮಾತಾಡಿದ್ರೆ ಹುಷಾರ್..! ಸಿದ್ದರಾಮಯ್ಯಗೆ  ಆರ್‌.ಅಶೋಕ್‌ ಎಚ್ಚರಿಕೆ 

04:46 PM Jun 05, 2022 | Team Udayavani |

ಬೆಂಗಳೂರು: ಆರ್‌ಎಸ್‌ಎಸ್‌ ಚಡ್ಡಿ ಸುಡುವ ಅಭಿಯಾನದ ಬಗ್ಗೆ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕಂದಾಯ ಸಚಿವ ಆರ್‌.ಅಶೋಕ್‌ ಎಚ್ಚರಿಕೆ ನೀಡಿದ್ದಾರೆ.

Advertisement

ಈ ರೀತಿ ಸುಡೋರೆಲ್ಲ ಮನೆ ಸುಟ್ಟಿಕೊಂಡಿದ್ದಾರೆ.ಆಂಜನೇಯನ ಬಾಲಕ್ಕೆ ಬೆಂಕಿ ಬಿದ್ದು, ಇಡೀ ಲಂಕೆಯೇ ಸುಟ್ಡಿ ಹೋಯಿತು ಆರ್ ಎಸ್ಎಸ್ ಶಕ್ತಿ ಏನು ಪ್ರಪಂಚಕ್ಕೆ ಕಾಂಗ್ರೆಸ್ ಗೆ ಗೊತ್ತಿದೆ.

ಪ್ಯಾಂಟ್‌, ಚಡ್ಡಿ ಸುಡುವುದನ್ನೆಲ್ಲಾ ಬಿಟ್ಡು ಬಿಡಿ. ಆರ್ ಎಸ್ ಎಸ್ ತಂಟೆಗೆ ಬಂದರೆ ಸುಟ್ಡು ಹೋಗುತ್ತೀರಿ ಎಂದರು.

ನೀವೆಲ್ಲರೂ ಚುನಾವಣೆಗೆ ಹೋಗ್ತಿದ್ದೀರಿ,ಸ್ವಲ್ಪ ಹುಷಾರಾಗಿರಿ ನೀವೇ ಬಾದಾಮಿಯಲ್ಲಿ ಸ್ವಲ್ಪ ಅಂತರದಿಂದ ಗೆದ್ದಿದ್ದೀರಿ . ಮುಂದೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಕ್ಷೇತ್ರ ಹುಡುಕ್ತಿದ್ದೀರಿ ಈಗ ಆರ್ ಎಸ್ ಎಸ್ ಬಗ್ಗೆ ಟೀಕೆ ಮಾಡಿದ್ರೆ, ಚುನಾವಣೆಯಲ್ಲಿ ಸೋಲುತ್ತೀರಿ. ಕೇವಲ ಸೋನಿಯಾ ಗಾಂಧಿಯನ್ನ ಮೆಚ್ಚಿಸುವುದಕ್ಕೆ ಹೋಗಿ ನೀವು ಚುನಾವಣೆಯಲ್ಲಿ ಸುಟ್ಟು ಹೋಗುತ್ತೀರಿ ಹುಷಾರ್‌ ಎಂದು ಸಿದ್ದರಾಮಯ್ಯಗೆ ಅಶೋಕ್‌ ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ರಾಜ್ಯಸಭಾ ಚುನಾವಣೆಯಲ್ಲಿ ಮೂರನೇ ಅಭ್ಯರ್ಥಿ ಗೆಲ್ಲುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಸಚಿವರು ನಮ್ಮ ಬಳಿ ಅಗತ್ಯ ಮತಗಳು ಇರೋದಕ್ಕೆ ಮೂರನೇ ಅಭ್ಯರ್ಥಿ ಹಾಕಿದ್ಸೇವೆ ನೂರಕ್ಕೂ ನೂರರಷ್ಟು ಮೂರು ಅಭ್ಯರ್ಥಿಗಳು ಆಯ್ಕೆ ಆಗುತ್ತಾರೆ. ಈಗಾಗಲೇ ಅಭ್ಯರ್ಥಿಗಳನ್ನು ಗೆಲ್ಲಿಸಲು ನಮ್ಮ ನಾಯಕರೆಲ್ಲರೂ ಸೇರಿ ಫೀಲ್ಡಿಗೆ ಇಳಿದಿದ್ದೇವೆ ಇಲ್ಲಿ ಕಾಂಗ್ರೆಸ್, ಜೆಡಿಎಸ್ ಅನಾವಶ್ಯಕವಾಗಿ ಅಭ್ಯರ್ಥಿಗಳು ಹಾಕಿದ್ದಾರೆ ಒಂದು ಕಡೆ ನಿತ್ಯ ಇಬ್ರು ಕಿತ್ತಾಡ್ತಾರೆ ಇನ್ನೊಂದು ಕಡೆ ಅವರು ಇವರನ್ನು ಮತ ಕೇಳಿದ್ದೇವೆ ಅಂತಾರೆ ಕೊನೆಗೆ ಇದು ಯಾವುದು ವರ್ಕೌಟ್ ಆಗಲ್ಲಎಂದು ಹೇಳಿದರು.

Advertisement

ನಿಜವಾಗಿಯೂ ಮತದಾನ ನಡೆಯೋದ ಓಟ್ ಮೇಲೆ, ಮತದಾನ ವ್ಯಾಲ್ಯೂ ಮೇಲೆ ಎರಡನೇ ಪ್ರಾಶಸ್ತ್ಯ ಮತ, ಮೂರನೇ ಪ್ರಾಶಸ್ತ್ಯ ಮತ ಮೌಲ್ಯಗಳ ಮೇಲೆ ಚುನಾವಣೆ ನಡೆಯೋದು ನಮಗೆ 122 ಮತಗಳು ಇವೆ, ಸುಲಭವಾಗಿ ಗೆಲ್ಲುವ ವಿಶ್ವಾಸ ಇದೆ ಎಂದು ಸಚಿವರು ಅಭಿಪ್ರಾಯಪಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next