Advertisement

Siddaramaiah: ಈ ಹಿಂದೆ ನಿಖಿಲ್‌ ಕುಮಾರಸ್ವಾಮಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ?

12:27 AM Oct 28, 2024 | Team Udayavani |

ಬೆಂಗಳೂರು: ಎಚ್‌.ಡಿ. ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದರು. ನಿಖಿಲ್‌ ಮಂಡ್ಯದ ಲೋಕಸಭೆ ಉಪ ಚುನಾವಣೆ ಅನಂತರ ರಾಮನಗರದ ಚುನಾವಣೆಯಲ್ಲಿಯೂ ಸೋತಿದ್ದರು. ಆಗ ಪುತ್ರ ಅಭಿಮನ್ಯು ಆಗಿರಲಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

Advertisement

ಚನ್ನಪಟ್ಟಣ ಉಪಚುನಾವಣೆ ಸಂಬಂಧ ಕಾಂಗ್ರೆಸ್‌ ಏನೇ ಕುತಂತ್ರ ಮಾಡಿದರೂ ಈ ಬಾರಿ ನಿಖಿಲ್‌ ಕುಮಾರಸ್ವಾಮಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಲಿದ್ದಾರೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ನಗರದಲ್ಲಿ ಮಾಧ್ಯಮಗಳಿಗೆ ಈ ರೀತಿ ಪ್ರತಿಕ್ರಿಯಿಸಿದರು.

3 ಕ್ಷೇತ್ರಗಳ ಉಪ ಚುನಾವಣೆಯ ಸಿದ್ಧತೆಗಳ ಕುರಿತು ಶಾಸಕರು, ಸಚಿವರು, ಸಂಸದರು, ಪರಿಷತ್‌ ಸದಸ್ಯರ ವರ್ಚುವಲ್‌ ಸಭೆ ನಡೆಸಲಾಗಿದೆ. ಈ ಮೂಲಕ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next