Advertisement

ಕ್ರಿಮಿನಲ್‌ ಪ್ರಕರಣ ವಾಪಸ್‌ ಮಾಹಿತಿ ಕೋರಿದ ಸಿದ್ದರಾಮಯ್ಯ

10:32 PM Sep 05, 2020 | mahesh |

ಬೆಂಗಳೂರು: ರಾಜ್ಯ ಸರಕಾರವು 2009ರಿಂದ ಇದುವರೆಗೆ ಸಂಘಟನೆಗಳು ಮತ್ತು ರಾಜಕೀಯ ವ್ಯಕ್ತಿಗಳ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಮೊಕದ್ದಮೆಗಳನ್ನು ವಾಪಸ್‌ ಪಡೆದಿರುವ ಬಗೆಗಿನ ಮಾಹಿತಿಯನ್ನು ನೀಡುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗೃಹ ಸಚಿವ ಬಸವರಾಜ್‌ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.

Advertisement

ಎನ್‌ಡಿಪಿಎಸ್‌ ಕಾಯ್ದೆ ಅಡಿಯಲ್ಲಿ 10 ವರ್ಷಗಳಿಂದ ತೆಗೆದುಕೊಂಡಿರುವ ಕಾನೂನು ಕ್ರಮಗಳು ಹಾಗೂ ಅವುಗಳ ಈಗಿನ ಸ್ಥಿತಿಗತಿ ಕುರಿತು ಜಿಲ್ಲಾವಾರು ಮಾಹಿತಿಯನ್ನು ಒದಗಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಪ್ರಕರಣಗಳಲ್ಲಿ ಪೊಲೀಸರು ಕೈಜೋಡಿಸಿದ್ದಾರೆಯೇ? ಹೌದಾಗಿದ್ದರೆ ಎಷ್ಟು ಪೊಲೀಸ್‌ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ? ಎನ್‌ಡಿಪಿಸಿ ಕಾಯ್ದೆಯ ಪ್ರಕಾರ ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದ ಸಮಿತಿಗಳನ್ನು ರಚಿಸಲಾಗಿದೆಯೇ ಮುಂತಾದ ಪ್ರಶ್ನೆಗಳನ್ನೂ ಅವರು ಕೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next