Advertisement

ಲೋಕಸಭೆ ಚುನಾವಣೆ ಬಳಿಕ ಸಿದ್ದು ಮತ್ತೆ ಸಿಎಂ

01:40 AM Feb 22, 2019 | Team Udayavani |

ಬಾಗಲಕೋಟೆ: ಲೋಕಸಭೆ ಚುನಾವಣೆ ಮುಗಿದ 4-5 ತಿಂಗಳಲ್ಲಿ ಈ ರಾಜ್ಯದ ಮುಖ್ಯಮಂತ್ರಿಯಾಗಿ ಪುನಃ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಳ್ಳಲಿದ್ದಾರೆಂದು ಬಸವಕಲ್ಯಾಣ ಶಾಸಕ ಬಿ.ನಾರಾಯಣರಾವ್‌ ಹೇಳಿದರು.

Advertisement

ಬಾದಾಮಿಯಲ್ಲಿ ನಡೆದ ಗಂಗಾಮತಸ್ಥ ಅಂಬಿಗರ ಸಮಾವೇಶದಲ್ಲಿ ಮಾತನಾಡಿದ ಅವರು, 100ಕ್ಕೆ ನೂರರಷ್ಟು ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಯಾಗಲಿದ್ದಾರೆ. ಅವರಂತಹ ಸಮರ್ಥ ನಾಯಕ ನಮಗೆ ಸಿಕ್ಕಿದ್ದಾರೆ. ನನ್ನನ್ನುಗುರುತಿಸಿ, ಬಸವಕಲ್ಯಾಣದಲ್ಲಿ ಟಿಕೆಟ್‌ ಕೊಡಿಸಿದರು. ಅಷ್ಟೇ ಅಲ್ಲದೆ, ಇಡೀ ಹಾಲುಮತ ಸಮಾಜ ಟೊಂಕಕಟ್ಟಿ ನಿಂತು ನನ್ನನ್ನು ಗೆಲ್ಲಿಸುವಂತೆ ಮಾಡಿದರು. 18 ಸಾವಿರ ಮತಗಳ
ಅಂತರದಿಂದ ನನ್ನನ್ನು ಗೆಲ್ಲಿಸಿದರು. ಸಿದ್ದರಾಮಯ್ಯಗೆ ನಾವು ಎಲ್ಲಾ ರೀತಿಯ ಸಹಕಾರ-ಶಕ್ತಿ ಕೊಡಬೇಕು ಎಂದರು

Advertisement

Udayavani is now on Telegram. Click here to join our channel and stay updated with the latest news.

Next