Advertisement

ಜಮೀರ್ ಅಹ್ಮದ್ ಹಾಗೂ ಸಿದ್ದರಾಮಯ್ಯ ಟಿಪ್ಪು ರಕ್ತ ಹಂಚಿಕೊಂಡು ಹುಟ್ಟಿದ್ದಾರೆ: ಈಶ್ವರಪ್ಪ

03:47 PM Feb 28, 2023 | Team Udayavani |

ಶಿವಮೊಗ್ಗ: ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕೋಲಾರದಲ್ಲಿ ಸ್ಪರ್ಧಿಸುವುದಿಲ್ಲ. ಒಂದೊಮ್ಮೆ ಸ್ಪರ್ಧಿಸಿದರೂ ಗೆಲ್ಲುವುದಿಲ್ಲ.ಏಕೆಂದರೆ ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ್, ಮುನಿಯಪ್ಪ ಮತ್ತು ಶ್ರೀನಿವಾಸ್  ಪ್ರಸಾದ್ ಅವರೇ ಸಿದ್ದರಾಮಯ್ಯ ಗೆಲ್ಲಲು ಬಿಡುವುದಿಲ್ಲ. ಇವರೆಲ್ಲರ ಸೋಲಿಗೆ ಸಿದ್ದರಾಮಯ್ಯ ಕಾರಣವಾಗಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

Advertisement

ಸಿದ್ದರಾಮಯ್ಯಗೆ ಜಮೀರ್ ಅಹ್ಮದ್ ರ ಚಾಮರಾಜನಗರ ಕ್ಷೇತ್ರ ಸುರಕ್ಷಿತ. ಏಕೆಂದರೆ ಜಮೀರ್ ಅಹ್ಮದ್ ಹಾಗೂ ಸಿದ್ದರಾಮಯ್ಯ ಅವರು ಟಿಪ್ಪು ರಕ್ತ ಹಂಚಿಕೊಂಡು ಹುಟ್ಟಿದ್ದಾರೆ. ಉಳಿದಂತೆ ರಾಜ್ಯದ 223 ಕ್ಷೇತ್ರಗಳಲ್ಲೂ ಸಿದ್ದರಾಮಯ್ಯ ಸೋಲಲಿದ್ದಾರೆ ಎಂದು ವ್ಯಂಗ್ಯವಾಡಿದರು.

ಮತ್ತೆ ಬಾದಾಮಿಯಿಂದಲೇ ಸ್ಪರ್ಧಿಸಿ ಎಂದು ಸಿದ್ಧರಾಮಯ್ಯರಿಗೆ ಯಡಿಯೂರಪ್ಪ ಹೇಳಿದ್ದರು. ಏನೋ ಹಿರಿಯರಾಗಿ ಸಲಹೆ ಕೊಟ್ಟಿದ್ದರು. ಅದನ್ನು ಕೂಡ ಅವರು ತಿರಸ್ಕರಿಸಿದ್ದಾರೆ. ಹಿರಿಯರ ಮಾರ್ಗದರ್ಶನ ಬೇಕು ಎಂದರೆ, ಅವರ ಮಾತು ಕೇಳಬಹುದಿತ್ತು ಎಂದು ಈಶ್ವರಪ್ಪ ಹೇಳಿದರು.

ಇದನ್ನೂ ಓದಿ:ಪಟಾಕಿ ತುಂಬಿದ್ದ ಇ-ರಿಕ್ಷಾ ಸ್ಪೋಟ : ಎದೆ ಝಲ್ಲೆನ್ನಿಸುವ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆ

ಪದೇ ಪದೇ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಬರುವ ಬಗ್ಗೆ ಕಾಂಗ್ರೆಸ್ ಟೀಕೆಗೆ ಪ್ರತಿಕ್ರಿಯೆ ನೀಡಿ, ಸಿದ್ಧರಾಮಯ್ಯ ಮತ್ತು ಡಿ.ಕೆ‌. ಶಿವಕುಮಾರ್ ಮಾತ್ರ ಎಲ್ಲೆಡೆ ಹೋಗ್ತಾರೆ. ಸಮಾವೇಶಗಳನ್ನು ಮಾಡಿಕೊಂಡು ಅವರಿಬ್ಬರು ಓಡಾಡ್ತಿದ್ದಾರೆ. ಅವರಿಬ್ಬರು ಬಾಯಿಗೆ ಬಂದಂತೆ ಮಾತಾಡ್ತಾ ಓಡಾಡುತ್ತಿದ್ದಾರೆ. ಅವರಲ್ಲಿ ನಾಯಕರೇ ಇಲ್ಲ. ಹಾಗಾಗಿ ಅವರು ಯಾರೂ ರಾಜ್ಯಕ್ಕೆ ಬರುವುದಿಲ್ಲ. ಕಾಂಗ್ರೆಸ್ ನಲ್ಲಿ ರಾಷ್ಟ್ರೀಯ ನಾಯಕರಿಲ್ಲದೇ ಸೊರಗುತ್ತಿದೆ. ನಮ್ಮಲ್ಲಿ ರಾಜ್ಯ ನಾಯಕರು, ರಾಷ್ಟ್ರೀಯ ನಾಯಕರಿದ್ದಾರೆ. ರಾಜ್ಯಕ್ಕೆ ಪಕ್ಷ ಸಂಘಟನೆಗೆ ನಮ್ಮ ರಾಷ್ಟ್ರೀಯ ನಾಯಕರು ಬರುತ್ತಲೇ ಇರುತ್ತಾರೆ. ರಾಹುಲ್ ಗಾಂಧಿ, ಸೋನಿಯಾ ಹಾಗೂ ಪ್ರಿಯಾಂಕ ಗಾಂಧಿ ಪ್ರಚಾರ ಮಾಡಿದ ಕಡೆಯಲ್ಲೆಲ್ಲಾ ಕಾಂಗ್ರೆಸ್‌ ಸೋತಿದೆ ಎಂದರು.

Advertisement

ನಾಳೆಯಿಂದ ವಿಜಯ ಸಂಕಲ್ಪ ಯಾತ್ರೆ ಹೊರಡಲಿದೆ. ನಾಲ್ಕು ದಿಕ್ಕುಗಳಿಂದ ಈ ಯಾತ್ರೆ ಹೊರಡಲಿದೆ. ಚಾಮರಾಜನಗರದಿಂದ ನಾಳೆ ವಿಜಯ ಸಂಕಲ್ಪ ಯಾತ್ರೆ ಹೊರಡಲಿದೆ. ಜೆ.ಪಿ‌. ನಡ್ಡಾ ಅವರು ಈ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next