Advertisement

ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೆ ಸಿದ್ದರಾಮಯ್ಯ: ಕುಮಾರಸ್ವಾಮಿ ಆರೋಪ

09:59 AM Oct 25, 2021 | Team Udayavani |

ಮೈಸೂರು: ಸಿದ್ದರಾಮಯ್ಯ ಜಾತಿ ಜಾತಿಗಳನ್ನೇ ಒಡೆದರು‌. ಸಿಂಧಗಿ, ಹಾನಗಲ್‌ ನಲ್ಲಿ ಜಾತಿವಾರು ಸಭೆಗಳನ್ನು ಮಾಡುತ್ತಿದ್ದಾರೆ. ಜಾತ್ಯಾತೀತವಾಗಿದ್ದರೆ ಇವರು ಜಾತಿವಾರು ಸಭೆ ಯಾಕೆ ನಡೆಸುತ್ತಿದ್ದರು. ಇವರೆಂಥಾ ಜಾತ್ಯಾತೀತವಾದಿಗಳು. ಕರ್ನಾಟಕದಲ್ಲಿ ಜಾತಿ ವಿಷ ಬೀಜ ಬಿತ್ತಿದ್ದೇ ಸಿದ್ದರಾಮಯ್ಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಂಡ್ ಟೀಂ ಸಿಂದಗಿಯಲ್ಲಿ ಕುಳಿತಿರುವುದು ಜೆಡಿಎಸ್ ಸೋಲಿಸಿ ಬಿಜೆಪಿಯನ್ನ ಗೆಲ್ಲಿಸಲು. ಸಿಂದಗಿಯಲ್ಲಿ ಸ್ಪರ್ಧೆ ಇರುವುದೇ ಜೆಡಿಎಸ್ -ಬಿಜೆಪಿ ನಡುವೆ. ಹಾಗಾದರೆ ಕಾಂಗ್ರೆಸ್‌‌ನವರು ಅಲ್ಲಿ ಯಾಕೆ ಬೀಡು ಬಿಟ್ಟಿದ್ದಾರೆ. ಅವರ ಉದ್ದೇಶ ಜೆಡಿಎಸ್ ಸೋಲಿಸಿ ಬಿಜೆಪಿ ಗೆಲ್ಲಿಸುವುದು ಎಂದು ಆರೋಪಿಸಿದರು.

ಸಿದ್ದರಾಮಯ್ಯ ಪ್ರತಿ ಸಭೆಯಲ್ಲೂ ನನ್ನ ವಿರುದ್ದ ಹೊಲ ಉಳುಮೆ ಮಾಡಿದ್ದಾನ ಎಂದು ಆರೋಪ ಮಾಡುತ್ತಿದ್ದಾರೆ. ನಿಜವಾದ ರೈತ ನಾನು, ನಾವು ಕುರಿ ಮಂದೆಯ ನಡುವೆ ಊಟ ಮಾಡಿ‌ ಮಲಗಿದ್ದೇನೆ. ನಾನು ಕೃಷಿಕನೋ ಅಲ್ಲವೋ ಅಂತ ಬಿಡದಿ ತೋಟಕ್ಕೆ ಬಂದು ನೋಡಲಿ. ಆದರೆ ಸಿದ್ದರಾಮಯ್ಯ ಎಲ್ಲಿ ಹೊಲ ಉಳುಮೆ ಮಾಡಿದ್ದಾರೆ. ಅವರದ್ದೂ ಒಂದು ಫಾರಂ ಹೌಸ್ ಇದೆಯಲ್ಲವೇ, ಅಲ್ಲಿ ಅವರು ಏನು ಬಿತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದರು.

ಇದನ್ನೂ ಓದಿ:ರಾಜ್ಯದಲ್ಲಿ ಏಕರೂಪ ದರ ನಿಗದಿಯಿಂದ ಕಡಿವಾಣ ಸಾಧ್ಯ

ಬ್ರದರ್ ಬ್ರದರ್ ಮುಸಲ್ಮಾನರ ಕತ್ತು ಕುಯ್ಯುತ್ತಾರೆ ಎಂಬ ಜಮೀರ್ ಆರೋಪಕ್ಕೆ ತಿರುಗೇಟು ನೀಡಿದ ಅವರು, ಫಾರುಕ್‌ ರನ್ನು ಚುನಾವಣೆಗೆ ನಿಲ್ಲಿಸಿ ಕತ್ತು ಕೋಯ್ದವರು ಯಾರು? ಫಾರುಕ್ ವಿರುದ್ದ ರಾಮಸ್ವಾಮಿಗೆ ಓಟು ಹಾಕಿದ್ದು ಯಾರು? ಇವರಿಂದ ಮುಸಲ್ಮಾನರು ಉದ್ದಾರವಾಗಿದ್ದಾರ? ಹೋಗಲಿ ರಾಮಸ್ವಾಮಿಯವರನ್ನಾದರೂ ಉಳಿಸಿಕೊಂಡಿದ್ದಾರ? ಇವರಿಂದ ನಾವು ಕಲಿಯುವುದು ಏನಿಲ್ಲ‌. ಇವರೆಲ್ಲಾ ಚುನಾವಣೆಯುದ್ದಕ್ಕೂ ಹೀಗೆ ಮಾತನಾಡಲಿ. ನನಗೆ ಒಳ್ಳೆಯದು, ನಾನು ಅದನ್ನೇ ಆಶಿಸುತ್ತೇನೆ ಎಂದರು ಎಚ್ ಡಿಕೆ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next