Advertisement

ಪರಿಷತ್ : ಹಿಂದುಳಿದ ವರ್ಗ,ಮುಸ್ಲಿಂ ಅಥವಾ ಕ್ರೈಸ್ತರಿಗೆ ಅವಕಾಶಕ್ಕೆ ಸಿದ್ದರಾಮಯ್ಯ ಮನವಿ

03:39 PM May 22, 2022 | Team Udayavani |

ಬೆಂಗಳೂರು : ಕಾಂಗ್ರೆಸ್ ನಲ್ಲಿ ಪರಿಷತ್ ಚುನಾವಣೆಗೆ ರಣತಂತ್ರ ಜೋರಾಗಿದ್ದು, ಒಂದು ಸ್ಥಾನ ಹಿಂದುಳಿದ ವರ್ಗ ಮತ್ತೊಂದು ಸ್ಥಾನ ಮುಸ್ಲಿಂ ಅಥವಾ ಕ್ರೈಸ್ತ ಸಮುದಾಯಕ್ಕೆ ಅವಕಾಶ ಕೊಡಲು ಸಿದ್ದರಾಮಯ್ಯ ಹೈಕಮಾಂಡ್ ಗೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.

Advertisement

ಪರಿಷತ್ ಗೆ ಎಂ.ಆರ್. ಸೀತಾರಾಂ, ಎಂ.ಡಿ.ಲಕ್ಷ್ಮೀನಾರಾಯಣ, ಎಂ.ಸಿ.ವೇಣುಗೋಪಾಲ್, ತಿಪ್ಪಣ್ಣ ಕಮಕಾನೂರ, ಮನ್ಸೂರ್ ಅಲಿ ಖಾನ್ ಅಬ್ದುಲ್ ಜಬ್ಬಾರ್, ನಿವೇದಿತ್ ಆಳ್ವಾ, ಆಸ್ಕರ್ ಫರ್ನಾಡಿಸ್ ಪುತ್ರಿ ಹೆಸರು ಅಂತಿಮವಾಗಿದ್ದು, ರಾಜ್ಯಸಭೆಗೆ ಜೈರಾಮ್ ರಮೇಶ್ ಬಹುತೇಕ ಅಂತಿಮವಾಗಿದೆ ಎಂದು ತಿಳಿದು ಬಂದಿದೆ.

ಹೈಕಮಾಂಡ್ ಈ ಕುರಿತು ಈಗಾಗಲೇ ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ಅವರ ಅಭಿಪ್ರಾಯ ಪಡೆದಿದ್ದು, ಎಸ್.ಆರ್.ಪಾಟೀಲ್ ಪರ ಅಂತಿಮ ಕ್ಷಣದ ವರೆಗೆ ಡಿ.ಕೆ.ಶಿವಕುಮಾರ್ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಇಂದು ಎಸ್.ಆರ್.ಪಾಟೀಲ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next