Advertisement

ಪುನರ್‌ ಪರಿಶೀಲನೆಗೆ ಸಿದ್ದರಾಮಯ್ಯ ಆಗ್ರಹ

11:03 PM Jul 31, 2019 | Team Udayavani |

ಬೆಂಗಳೂರು: ರಾಜ್ಯ ಸರ್ಕಾರ ಟಿಪ್ಪು ಜಯಂತಿಯನ್ನು ಏಕಾಏಕಿ ರದ್ದು ಪಡಿಸಿರುವುದರ ಬಗ್ಗೆ ಪುನರ್‌ ಪರಿಶೀಲನೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Advertisement

ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಕೆಜೆಪಿಯಲ್ಲಿದ್ದಾಗ ಟಿಪ್ಪು ಟೋಪಿ ಹಾಕಿ ಖಡ್ಗ ಹಿಡಿದು, ಟಿಪ್ಪು ಪೋಷಾಕು ಹಾಕಿ ಅವರನ್ನು ಹಾಡಿ ಹೊಗಳಿದ್ದರು. ಬಿಜೆಪಿಯ ಜಗದೀಶ್‌ ಶೆಟ್ಟರ್‌, ಆರ್‌.ಅಶೋಕ್‌, ಪಿ.ಸಿ.ಮೋಹನ್‌ ಕೂಡ ಟಿಪ್ಪುರನ್ನು ಹಾಡಿ ಹೊಗಳಿದ್ದರು. ಈಗ ಟಿಪ್ಪು ಜಯಂತಿಯನ್ನು ಮಾತ್ರ ರದ್ದು ಮಾಡಿರುವುದು ಏಕೆ? ಬೇರೆ ಮಹಾಪುರುಷರ ಜಯಂತಿಗಳನ್ನು ಏಕೆ ರದ್ದು ಮಾಡಿಲ್ಲ ಎಂದು ಪ್ರಶ್ನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next