Advertisement

ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ತಿರುಗೇಟು 

12:30 AM Dec 31, 2018 | Team Udayavani |

ಬೆಂಗಳೂರು: ಬಿಜೆಪಿ ಕಾಂಗ್ರೆಸ್‌ ಶಾಸಕರ ಖರೀದಿಸಲು ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ತಿರುಗೇಟು ನೀಡಿದೆ.

Advertisement

ಕಳೆದ ಆರು ತಿಂಗಳಿಂದ ಇದೇ ಮಾತು ಹೇಳುತ್ತ ಕಣ್ಣೀರಿಡುತ್ತಿದ್ದೀರಿ. ದಲಿತ ವ್ಯಕ್ತಿ ಉಪ ಮುಖ್ಯಮಂತ್ರಿಯಾಗಿರುವುದನ್ನು ಸಹಿಸಲಾಗದ ನಿಮ್ಮ ವರ್ತನೆಯಿಂದ ಕಾಂಗ್ರೆಸ್‌ ಸಚಿವರೇ ಅಸಮಾಧಾನಗೊಂಡಿದ್ದಾರೆ. ನೀವು ಸರ್ಕಾರವನ್ನು
ನಿಯಂತ್ರಣದಲ್ಲಿಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದೀರಿ, ಅದು ಸರ್ಕಾರದ ಪತನಕ್ಕೆ ದಾರಿ ಮಾಡಿಕೊಡುತ್ತಿದೆ. ನಿಮ್ಮ ವೈಫ‌ಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಬಿಜೆಪಿ ಮೇಲೆ ಆರೋಪ ಮಾಡುವುದನ್ನು ನಿಲ್ಲಿಸಿ ಎಂದು ರಾಜ್ಯ ಬಿಜೆಪಿ ಘಟಕ ಸಿದ್ದ ರಾಮಯ್ಯ ಅವರಿಗೆ ಟ್ವೀಟ್‌ ಮೂಲಕ ತಿರುಗೇಟು ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next