Advertisement

ಸಿದ್ದರಾಮಯ್ಯ ಹೇಳಿಕೆ 9ನೇ ಅದ್ಭುತ: ಎಚ್‌ಡಿಕೆ

07:05 AM May 03, 2018 | Team Udayavani |

ಬೀದರ: “ಅಮಿತ್‌ ಶಾ ಮತ್ತು ಕುಮಾರಸ್ವಾಮಿ ಅವರು ಬಿಜೆಪಿ ಹಾಗೂ ಜೆಡಿಎಸ್‌ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ನೀಡಿರುವ ಹೇಳಿಕೆ 9 ನೇ ಅದ್ಭುತ’ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ
ವ್ಯಂಗ್ಯವಾಡಿದರು.

Advertisement

ಭಾಲ್ಕಿಯಲ್ಲಿ ನಡೆದ ಜೆಡಿಎಸ್‌ ಪ್ರಚಾರ ಸಭೆಯಲ್ಲಿ ಮಾತನಾಡಿ, “ರಾಜ್ಯದಲ್ಲಿ ಜೆಡಿಎಸ್ಗೆ ಪೂರ್ಣ ಬಹುಮತ ಸಿಗಲಿದೆ. ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳಿಕೊಂಡು ರಾಜಕೀಯ ಮಾಡುವುದನ್ನು ಬಿಡಲಿ. ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ ದಿಟ್ಟ ದಲಿತ ಮಹಿಳೆ. ಯಾರ ಜತೆಗೆ ಕೈಜೋಡಿಸದವರು ರಾಜ್ಯದಲ್ಲಿ ಜೆಡಿಎಸ್‌ ಜತೆಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯಕ್ಕೆ ದ್ರೋಹ ಮಾಡಿದ್ದು, ಆ ಪಕ್ಷಗಳ ಜತೆಗಿನ ಮೈತ್ರಿ ಅನುಭವ ನನಗಿದೆ. ಹಾಗಾಗಿ
ಯಾವುದೇ ಪಕ್ಷಗಳ ಜತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next