Advertisement

ಕೇರಳದಿಂದ ಕರ್ನಾಟಕ ಗಡಿ ಒಳಗೆ ಯಾರನ್ನೂ ಬಿಡಬೇಡಿ: ಸಿದ್ದರಾಮಯ್ಯ ಸೂಚನೆ

09:10 AM Apr 01, 2020 | keerthan |

ಬೆಂಗಳೂರು: ಕೇರಳ ರಾಜ್ಯದವರು ಕೋವಿಡ್-19 ಸೋಂಕು ಇರುವವರನ್ನು ಕರ್ನಾಟಕಕ್ಕೆ ಕಳುಹಿಸುತ್ತಿದ್ದಾರೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು ಗಡಿ ಮೂಲಕ ರಾಜ್ಯಕ್ಕೆ ಕಳುಹಿಸುತ್ತಿದ್ದಾರೆ. ಕೇರಳದವರನ್ನು ರಾಜ್ಯದ ಗಡಿಯೊಳಗೆ ಬರದಂತೆ ತಡೆಯಿರಿ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

Advertisement

ಮೈಸೂರು ಜಿಲ್ಲಾಧಿಕಾರಿಯವರ ಜೊತೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಈ ಸೂಚನೆ ನೀಡಿದರು.

ರಾಜ್ಯದಲ್ಲಿ ಕೋವಿಡ್-19 ವಿರುದ್ಧ ಹೋರಾಡಲು ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಸಭೆ ಸೇರಿ ಚರ್ಚೆ ನಡೆಸಿದರು.

ಈ ವೇಳೆ ಮೈಸೂರು ಜಿಲ್ಲಾಧಿಕಾರಿಯವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಿದ್ದಾರಮಯ್ಯ, ರೈತರಿಗೆ ಬೆಳೆ ನಷ್ಟ ಆಗಬಾರದು. ಎಪಿಎಂಸಿ ಗಳ ಮೂಲಕ ರೈತರ ಬೆಳೆಗಳನ್ನ ಖರೀದಿ ಆರಂಭಿಸಿ ಎಂದು ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next