Advertisement

ಸಾವರ್ಕರ್ ಗೆ ಭಾರತರತ್ನ: ಸಿದ್ದರಾಮಯ್ಯ ಮೊದಲು ಇತಿಹಾಸ ತಿಳಿದುಕೊಳ್ಳಲಿ

09:53 AM Oct 22, 2019 | Team Udayavani |

ಹುಬ್ಬಳ್ಳಿ: ಇತಿಹಾಸವನ್ನು ತಿಳಿದುಕೊಳ್ಳದೇ ಸಿದ್ಧರಾಮಯ್ಯ ಅವರು ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ. ಸಿದ್ಧರಾಮಯ್ಯ ಅವರು ಇತಿಹಾಸದ ಬಗ್ಗೆ ಸರಿಯಾಗಿ ತಿಳಿದುಕೊಳ್ಳಲಿ. ಇದು ಅವರ ವ್ಯಕ್ತಿತ್ವವನ್ನು ಹಾಗೂ ಕೀಳುಮಟ್ಟದ ಸಂಸ್ಕೃತಿಯನ್ನ ತೋರಿಸುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.

Advertisement

ಹುಬ್ಬಳ್ಳಿಯಲ್ಲಿ ಮಾತನಾಡಿ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ವಿಚಾರವನ್ನು ಟೀಕಿಸಿದ್ದ ಸಿದ್ದರಾಮಯ್ಯ ಅವರನ್ನು ಟೀಕಿಸಿದರು.

ಇನ್ನು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಹೇಳಿಕೆ ನೀಡಿದ್ದ ಉಮೇಶ ಕತ್ತಿ ವಿಚಾರವಾಗಿ ಮಾತನಾಡಿದ ಜಗದೀಶ್ ಶೆಟ್ಟರ್, ಯಾರೋ ಒಬ್ಬರ ವೈಯಕ್ತಿಕ ವಿಚಾರದ ಹೇಳಿಕೆ ಬಗ್ಗೆ ನಾನು ಮಾತನಾಡುವುದಿಲ್ಲ. ಅದರ ಬಗ್ಗೆ ಅವರಿಗೆ ಕೇಳಿ ನಾನೇನೂ ಹೇಳುವುದಿಲ್ಲ ಎಂದರು.

ಶೋಕಾಸ್ ನೋಟೀಸ್ ಗೆ ಬಸವನಗೌಡ ಪಾಟೀಲ ಯತ್ನಾಳ್ ಉತ್ತರಿಸದ ಬಗ್ಗೆ ಕೇಳಲಾದ ಪ್ರಶ್ನೆಗೆ ಶೆಟ್ಟರ್, ಆ ಬಗ್ಗೆ ನಾನೇನು ಉತ್ತರಿಸುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next