Advertisement

ಅಧಿಕಾರ ದುರ್ಬಳಕೆ ಮಾಡಿಕೊಂಡರೆ ಪ್ರಜಾಪ್ರಭುತ್ವ ಉಳಿಯಲ್ಲ: ಸಿದ್ದರಾಮಯ್ಯ

09:42 AM Nov 28, 2019 | keerthan |

ಹುಬ್ಬಳ್ಳಿ: ಬಿಜೆಪಿಯವರಿಗೆ ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬರಬೇಕು ಎಂಬುದಿಲ್ಲ ಎಂದು ವಿಪಕ್ಷ ನಾಯಕ‌ ಸಿದ್ದರಾಮಯ್ಯ ಹೇಳಿದರು.

Advertisement

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರಬೇಕು. ಆದರೆ ಬಿಜೆಪಿಯವರು ಬರೀ ಆಪರೇಷನ್ ಕಮಲ‌ ಮಾಡಿ ಅಧಿಕಾರಕ್ಕೆ ಬರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಯಾರಿಗೆ ನಂಬಿಕೆ ಇಲ್ಲವೋ ಅವರು ಇಂತಹ ಕೆಲಸ ಮಾಡುತ್ತಾರೆ ಎಂದು ಕುಟುಕಿದರು.

ಮಹಾರಾಷ್ಟ್ರದಲ್ಲಿ ಕಳ್ಳರು ಹಾಗೂ ದರೋಡೆಕೋರರು ರಾತ್ರೋರಾತ್ರಿ ರಾಷ್ಟ್ರಪತಿ ಆಡಳಿತ ಹಿಂಪಡೆದು ಅಧಿಕಾರಕ್ಕೆರಿದ್ದಾರೆ. ಅದು ಪ್ರಜಾಪ್ರಭುತ್ವದದ ಕಗ್ಗೊಲೆ. ಅಧಿಕಾರ ದುರ್ಬಳಕೆ ಮಾಡಿಕೊಂಡರೆ ಪ್ರಜಾಪ್ರಭುತ್ವ ಉಳಿಯಲ್ಲ ಎಂದರು.

ಅಜಿತ್ ಪವಾರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಅದಕ್ಕೆ ಬಿಜೆಪಿಗೆ ಸೇರಿಕೊಂಡಿದ್ದಾರೆ. ತಮ್ಮ ಮೇಲಿರುವ ಪ್ರಕರಣಗಳನ್ನು ವಜಾಗೊಳಿಸಿಕೊಳ್ಳಲಿಕ್ಕೆ ಹೋಗಿದ್ದಾರೆ ಎಂದರು.

ನಮ್ಮ ಬಳಿಯೂ ಬಿಜೆಪಿಯವರು ಸಂಪರ್ಕದಲ್ಲಿದ್ದಾರೆ. ನಾವು ಯಾವತ್ತಾದರೂ ಅವರನ್ನು ಕರೆದಿದ್ದೇವಾ? ಹೋಗುವವರು ಈಗಾಗಲೇ ಹೋಗಿದ್ದಾರೆ ಮತ್ತೆ ಯಾವ ಶಾಸಕರು ಹೋಗಲ್ಲ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next