ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧ ನಾಟಕ ಪ್ರದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಸಂಭಾಷಣೆ ಆರೋಪದಲ್ಲಿ ಬೀದರ್ ನ ಶಾಹಿನ್ ವಿದ್ಯಾಸಂಸ್ಥೆಯ ಮೇಲೆ ಪೊಲೀಸರು ಕ್ರಮ ಕೈಗೊಂಡಿರುವ ಕುರಿತು ಅಸಮಧಾನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಸರಕಾರ ವಿರುದ್ದ ಗುಡಿಗಿದ್ದಾರೆ.
Advertisement
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮಕ್ಕಳು ಮತ್ತು ಹೆತ್ತವರ ಬಗ್ಗೆ ಕ್ರಮ ಕೈಗೊಳ್ಳುತ್ತಿರುವ ರಾಜ್ಯ ಸರಕಾರ ನಡೆಯನ್ನು ಖಂಡಿಸುತ್ತೇನೆ. ಪುಟ್ಟ ಮಕ್ಕಳ ಪ್ರತಿರೋಧವನ್ನು ಎದುರಿಸಲಾಗದಷ್ಟು ಬಿಜೆಪಿ ಸೈದ್ಧಾಂತಿಕವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿದರು.
Related Articles
Advertisement