Advertisement

ರೋಗಿಗಳಿಗೆ ಸಂಚರಿಸಲು ಅವಕಾಶ ನಿಡುವಂತೆ ಸಿಎಂಗೆ ಸಿದ್ದರಾಮಯ್ಯ ಪತ್ರ

04:06 PM Apr 25, 2020 | keerthan |

ಬೆಂಗಳೂರು: ಲಾಕ್ ಡೌನ್ ಸಮಯದಲ್ಲಿ ಜಿಲ್ಲೆಗಳ ನಡುವೆ ವಾಹನ ಓಡಾಟಕ್ಕೆ ಅವಕಾಶವಿರದ ಕಾರಣ ರೋಗಿಗಳಿಗೆ ಕಷ್ಟವಾಗುತ್ತಿದೆ. ಹೀಗಾಗಿ ರೋಗಗಳಿಗೆ ಮತ್ತು ಸಂಬಂಧಿಗಳಿಗೆ ಓಡಾಡಲು ಮುಕ್ತ ಅವಕಾಶ ನೀಡಬೇಕು ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Advertisement

ಈ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಕಿಡ್ನಿ, ಕ್ಯಾನ್ಸರ್, ಹೃದಯ ಮುಂತಾದ ಮಾರಕ ಕಾಯಿಲೆಗೆ ತುತ್ತಾಗಿ ಬಳಲುತ್ತಿರುವವರು ಮತ್ತು ಅವರ ಸಂಬಂಧಿಕರುಗಳು ಆಸ್ಪತ್ರೆಗಳಿಗೆ ಹೋಗಿ ಬರಲು ಸಹ ಅವಕಾಶ ನೀಡದಂತೆ ಪೊಲೀಸರು ಮತ್ತುಇತರೆ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆಂದು ದೂರುಗಳು ಬರುತ್ತಿವೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ ಮುಂತಾದ ಜಿಲ್ಲೆಗಳವರು ಮಣಿಪಾಲದ ಆಸ್ಪತ್ರೆಗೆ ಹೋಗಬೇಕು. ಆದರೆ ಅಲ್ಲಿ ಪಾಸುಗಳನ್ನು ನೀಡುವಲ್ಲಿ ವಿಪರೀತ ಸಮಸ್ಯೆಗಳಾಗುತ್ತಿವೆ ಎಂಬ ದೂರುಗಳು ಬರುತ್ತಿವೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಬರೆದಿದ್ದಾರೆ.

ಹೀಗಾಗಿ 24 ಗಂಟೆಗಳ ಅವಧಿಗೆ ನೀಡುವ ಪಾಸುಗಳ ಅವಾಸ್ತವಿಕ ವಿಧಾನವನ್ನು ಬಿಟ್ಟು, ರೋಗಿಗಳು ಮತ್ತು ಅವರ ಸಂಬಂಧಿಕರ ವೈದ್ಯಕೀಯ ದಾಖಲೆಗಳ ಆಧಾರದ ಮೇಲೆ ಆಸ್ಪತ್ರೆಗಳಿಗೆ ಓಡಾಡಲು ಮುಕ್ತ ಅವಕಶ ನೀಡಲು ಜಿಲ್ಲಾಡಳಿತಗಳಿಗೆ ಸೂಕ್ತ ನಿರ್ದೇಶನವನ್ನು ನೀಡಬೇಕೆಂದು ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next