Advertisement

ರಾಜಕೀಯದಲ್ಲಿ ವಯಸ್ಸು ಮುಖ್ಯವಲ್ಲ, ಅರೋಗ್ಯ, ಕೆಲಸ ಮಾಡುವ ಉತ್ಸಾಹ ಮುಖ್ಯ : ಸಿದ್ದರಾಮಯ್ಯ

12:34 PM Aug 11, 2021 | Team Udayavani |

ಮೈಸೂರು : ರಾಜಕೀಯದಲ್ಲಿ ಮುಂದುವರೆಯಲು ವಯಸ್ಸು ಎಂದಿಗೂ ಅಡ್ಡಿಯಾಗುವುದಿಲ್ಲ, ನಿಮ್ಮಲ್ಲಿ ಉತ್ತಮ ಅರೋಗ್ಯ, ಕೆಲಸ ಮಾಡುವ ಉತ್ಸಾಹ ಮಾತ್ರ ಮುಖ್ಯವಾಗಿರುತ್ತೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರಾಜಕೀಯ ನಿವೃತ್ತಿಗೆ ವಯಸ್ಸು ಅಡ್ಡಿ ಬರುವುದಿಲ್ಲ, ನಿಮ್ಮಲ್ಲಿ ಉತ್ತಮ ಅರೋಗ್ಯ, ಜೊತೆಗೆ ಕೆಲಸ ಮಾಡುವ ಉತ್ಸಾಹ ಇದ್ದರೆ ಸಾಕು ಎಂದು ಹೇಳಿದರು, ನನಗೀಗ 75 ವರ್ಷವಾದರೂ ಚೆನ್ನಾಗಿದ್ದೇನೆ. ರಾಜಕೀಯದಲ್ಲಿ ಮುಂದುವರೆಯುವ ಆಸೆಯಿದೆ, ಹಾಗಾಗಿ ಮುಂದುವರೆದಿದ್ದೇನೆ. ನನಗೆ ಕೆಲಸ ಮಾಡುವ ಉತ್ಸಾಹವಿದೆ ಎಂದು ಹೇಳಿದ್ದಾರೆ.

Advertisement

ನಾವು ಅಧಿಕಾರಕ್ಕೆ ಬಂದ ಕೂಡಲೇ‌ ಜಾತಿಗಣತಿ
ಜಾತಿಗಣತಿ ಕುರಿತು ಮಾತನಾಡಿದ ಸಿದ್ದರಾಮಯ್ಯ ನಾವು ಅಧಿಕಾರಕ್ಕೆ ಬಂದ ಕೂಡಲೇ‌ ನಮ್ಮ ಮೊದಲ ಕೆಲಸವೇ ಜಾತಿಗಣತಿ ರಿಪೋರ್ಟ್ ಪಡೆಯೋದು, ವರದಿ ತೆಗೆದುಕೊಂಡು ಅದನ್ನ ಚರ್ಚೆಗೆ ಇಡುತ್ತೇ‌ನೆ. ರಿಪೋರ್ಟ್ ಪಡೆಯದಿದ್ದರೆ ಅದರಲ್ಲಿ‌ ಎನಿದೆ ಅಂತ ತಿಳಿಯೋದಾದ್ರು ಹೇಗೆ ಎಂದರು.

ಇದನ್ನೂ ಓದಿ :ಮೂಡಿಗೆರೆ : ಗ್ರಾಮಕ್ಕೆ ನುಗ್ಗಿದ ಕಾಡಾನೆ ; ಅರಣ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರ ಆಕ್ರೋಶ

ಸಚಿವ ಆನಂದ್ ಸಿಂಗ್ ರಾಜೀನಾಮೆ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿಯಲ್ಲಿ ಸಂಪುಟ ರಚನೆಯಲ್ಲಿ ಮನಸ್ತಾಪ ಇದೆ ಅನ್ನೋದನ್ನು ತೋರಿಸುತ್ತಿದೆ ಎಂದು ಹೇಳಿದ ಅವರು ಸಂಪುಟ ರಚನೆ ವೇಳೆಯೇ ಅಸಮಾಧಾನ ಹೊಗೆಯಾಡುತಿತ್ತು, ಇದೆ ಹೋಗೆ ಮುಂದೊಂದು ದಿನ ಜ್ವಾಲೆಯಾಗಿ ಸ್ಪೋಟಗೊಳ್ಳುವ ಲಕ್ಷಣ ಇದೆ ಎಂದು ಹೇಳಿದರು. ಯಾರಿಗೆ ಸಾಮಾಜಿಕ ನ್ಯಾಯದ ಮೇಲೆ ಗೌರವ ಇಲ್ಲವೋ ಅಂತವರ ಕೈಯಲ್ಲಿ ಉತ್ತಮ ಆಡಳಿತ ಕೊಡಲು ಹೇಗೆ ಸಾಧ್ಯ ಎಂದು ಬೊಮ್ಮಾಯಿ ಸರಕಾರವನ್ನು ಕುಟುಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next