Advertisement
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗ ಸಂಪುಟ ವಿಸ್ತರಣೆ ಆಗಿರೋದು ನೋಡಿದ್ರೆ ಇನ್ನು ಸ್ವಲ್ಪ ದಿನ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವ ಲಕ್ಷಣ ಕಂಡುಬರುತ್ತಿದೆ ಎಂದ ಅವರು ನಮಗಿದ್ದ ಮಾಹಿತಿ ಪ್ರಕಾರ ಹೈಕಮಾಂಡ್ ಯಡಿಯೂರಪ್ಪನವರ ಬಳಿ ರಾಜಿನಾಮೆಯನ್ನು ಕೇಳಿದೆ ಆದರೆ ಬಿಎಸ್ ವೈ ಸಂಪುಟ ವಿಸ್ತರಣೆ ಮಾಡಿ ಬಳಿಕ ರಾಜಿನಾಮೆಯನ್ನು ಕೊಡ್ತೀನಿ ಎಂದು ಹೇಳಿರಬಹುದು ಹಾಗಾಗಿ ಇನ್ನು ಸ್ವಲ್ಪ ದಿನ ಮುಖ್ಯಮಂತ್ರಿಯಾಗಿ ಮುಂದುವರೆಯುವ ಲಕ್ಷಣ ಇದೆ ಎಂದಿದ್ದಾರೆ.
ಯಡಿಯೂರಪ್ಪ ಬಜೆಟ್ ಮಂಡಿಸಲೇಬೇಕು ಇಲ್ಲದಿದ್ದಲ್ಲಿ ಮಾರ್ಚ್ ನಂತರ ಒಂದು ರೂಪಾಯಿಯೂ ಖರ್ಚು ಮಾಡೋಕೆ ಆಗೋದಿಲ್ಲ ಇವರಿಗೆ ಎಂದಿದ್ದಾರೆ. ನನ್ನ ಬಜೆಟ್ ಸ್ಟೈಲ್ ಬೇರೆ ಇತ್ತು, ಇವರ ಬಜೆಟ್ ಸ್ಟೈಲ್ ಬೇರೆ ಇದೆ ಈಗ ಮೀಟಿಂಗ್ ಮಾಡ್ತಿದ್ದೀವಿ ಅಂತ ಹೇಳಿದ್ದಾರೆ ನೋಡೋಣ ಏನ್ ಮಾಡ್ತಾರೆ ಅಂತ ಹೇಳಿದರು.