Advertisement

ಉತ್ತರಪ್ರದೇಶದಲ್ಲಿ ಯೋಗಿ ಆಡಳಿತ ಇರುವವರೆಗೆ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ: ಸಿದ್ದು

07:49 PM Oct 01, 2020 | sudhir |

ಬೆಂಗಳೂರು : ಯೋಗಿ ಆದಿತ್ಯನಾಥ್ ಸರಕಾರ ಎಲ್ಲಿಯವರೆಗೆ ಉತ್ತರ ಪ್ರದೇಶದಲ್ಲಿ ಇರುತ್ತದೋ ಅಲ್ಲಿಯವರೆಗೆ ಅಲ್ಲಿಯ ತನಕ ಈ ಪ್ರದೇಶದ ಹೆಣ್ಣು ಮಕ್ಕಳು ಸುರಕ್ಷಿತರಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಪ್ರದೇಶ ಸರಕಾರದ ವಿರುದ್ಧ ಗುಡುಗಿದ್ದಾರೆ.

Advertisement

ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇದರ ಹೊಣೆಯನ್ನು ಯೋಗಿ ಆದಿತ್ಯನಾಥ್ ಮಾತ್ರವಲ್ಲ ಅವರನ್ನು ಬೆಂಬಲಿಸುವ ಪ್ರಧಾನಿ ನರೇಂದ್ರ ಮೋದಿ ಮತ್ತು ಸಮಸ್ತ ಸಂಘ ಪರಿವಾರ ಕೂಡಾ ಹೊರಬೇಕಾಗುತ್ತದೆ, ಕೂಡಲೇ ಯೋಗಿ ಆದಿತ್ಯನಾಥ್ ಅವರನ್ನು ಸ್ಥಾನದಿಂದ ಕಿತ್ತು ಉತ್ತರಪ್ರದೇಶವನ್ನು ರಕ್ಷಿಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ, ಹೆತ್ತವರನ್ನು ಗೋಳಾಡಿಸಿದ ಯೋಗಿ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ ಮೊದಲು ಅಧಿಕಾರದಿಂದ ಕಿತ್ತುಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಬಾಬ್ರಿ ಅಂತಿಮ ತೀರ್ಪು: ಆಡ್ವಾಣಿ, ಉಮಾ ಸೇರಿ 32 ಆರೋಪಿಗಳಿಗೆ ಶಿಕ್ಷೆಯಾದ್ರೆ ಮುಂದೇನು?

Advertisement

Udayavani is now on Telegram. Click here to join our channel and stay updated with the latest news.

Next