Advertisement

ಈಶ್ವರಪ್ಪನಿಗೆ ಸಂಸ್ಕಾರ, ಸಂಸ್ಕೃತಿ ಏನೆಂಬುದು ಗೊತ್ತಿಲ್ಲ : ಸಿದ್ದರಾಮಯ್ಯ ಕಿಡಿ

02:56 PM Aug 10, 2021 | Team Udayavani |

ಮೈಸೂರು: ಈಶ್ವರಪ್ಪನಿಗೆ ಸಂಸ್ಕಾರ, ಸಂಸ್ಕೃತಿಯೇ ಗೊತ್ತಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.

Advertisement

ಕಾಂಗ್ರೆಸ್ ವಿರುದ್ಧ ಕೆ‌.ಎಸ್. ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ವಿಚಾರವಾಗಿ ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಬೇಕಾದರೂ ಅವ್ರು ಬಳಸಿರುವ ಪದವನ್ನು ಬಳಸಬಹುದು. ಸಂಸ್ಕಾರ ಇರುವವರು ಅಂತಹ ಪದವನ್ನು ಬಯಸುವುದಿಲ್ಲ ಎಂದರು.

ಈಶ್ವರಪ್ಪ ಬೆಳೆದು ಬಂದಿರುವ ಹಾದಿಯೇ ಹಾಗಿದೆ. ಅವ್ರಿಂದ ಬದಲಾವಣೆಗಳನ್ನು ನಿರೀಕ್ಷೆ ಮಾಡಲೇಬಾರದು‌. ಆಡಳಿತದಲ್ಲಿರುವವರು ಟೀಕೆಗಳನ್ನ ಆರೋಗ್ಯ ಪೂರ್ಣವಾಗಿ ಸ್ವೀಕರಿಸಬೇಕು. ರಾಜಕಾರಣದಲ್ಲಿ ಟೀಕೆ ಬರುವುದು ಸಹಜ. ಅದಕ್ಕೆ ಈ ರೀತಿ ಪ್ರತಿಕ್ರಿಯೆ ನಿಡೋದು ಸರಿಯಲ್ಲ ಎಂದರು.

ಇದನ್ನೂ ಓದಿ : ಕಂಠಪೂರ್ತಿ ಕುಡಿದು ಚಾಲನೆ: ವಾಹನಗಳಿಗೆ ಢಿಕ್ಕಿ ಹೊಡೆದು ಮನೆಯೊಳಗೆ ಲಾರಿ ನುಗ್ಗಿಸಿದ ಚಾಲಕ

ಈಶ್ವರಪ್ಪ ಮೊದಲಿನಿಂದಲೂ ಹೀಗೆಯೇ ಮಾತ್ನಾಡುತ್ತಿದ್ದಾರೆ. ಅವರಿಗೆ ಆರೋಗ್ಯಕರವಾದ ಸಂಸ್ಕೃತಿಯೇ ಇಲ್ಲ. ಬಿಜೆಪಿಯವರ ಸಂಸ್ಕೃತಿಯೇ ಇಂತದ್ದು. ಈಶ್ವರಪ್ಪರಿಗೆ ಬಿಜೆಪಿ ಬುದ್ದಿ ಹೇಳುವ ಕೆಲಸ ಮಾಡುತ್ತಿಲ್ಲ ಎಂದು ಈಶ್ವರಪ್ಪ ವಿರುದ್ಧ ಕಿಡಿಕಾರಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next