Advertisement

ಸೋಮಣ್ಣನಾದರೂ ಬರಲಿ…ಬೇರೆ ಯಾರೇ ಬರಲಿ…ವರುಣಾದಲ್ಲಿ ಗೆದ್ದೇ ಗೆಲ್ಲುತ್ತೇನೆ: ಸಿದ್ದು

12:43 AM Apr 14, 2023 | Team Udayavani |

ಮೈಸೂರು: ಸೋಮಣ್ಣನಾದರೂ ಬರಲಿ, ಯಾರಾದರೂ ಬರಲಿ; ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಗುರುವಾರ ಇಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಎದುರಾಳಿ ಯಾರು ಎಂದು ನಾನು ನೋಡುವುದಿಲ್ಲ. ಮತದಾರರ ಮೇಲೆ ವಿಶ್ವಾಸ ಇಟ್ಟಿದ್ದೇನೆ. ಸಿದ್ದರಾಮಯ್ಯ ಅವರನ್ನು ಗೆಲ್ಲಿಸಬೇಕೆಂದು ಮತದಾರರು, ಕಾರ್ಯಕರ್ತರು ತೀರ್ಮಾನ ಮಾಡಿದ್ದಾರೆ. ಸೋಮಣ್ಣ ಈಗ ಬಂದಿದ್ದಾರೆ. ಪ್ರಚಾರ ಮಾಡಲಿ. ನಮ್ಮ ಹುಡುಗ ಈಗಾಗಲೇ ಪ್ರಚಾರ ಮಾಡಿ ಮುಗಿಸಿದ್ದಾನೆ. ವರುಣಾ ಕ್ಷೇತ್ರದಲ್ಲಿ ಹಣದ ಹೊಳೆಯನ್ನು ಹರಿಸಲಿ, ಏನನ್ನಾದರೂ ಮಾಡಲಿ. ನಾನು ಇದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.

ಕೋಲಾರದಿಂದ ಸ್ಪರ್ಧಿಸುವ ಕುರಿತು ಪ್ರಶ್ನಿಸಿದಾಗ, ಈ ಬಗ್ಗೆ ಹೈಕಮಾಂಡ್‌ ತೀರ್ಮಾನಿಸುತ್ತದೆ. ಕೋಲಾರದಲ್ಲಿ ಸ್ಪರ್ಧಿಸಿ ಎಂದರೆ ಸ್ಪರ್ಧಿಸುವೆ. ಇಲ್ಲ ಅಂದರೆ ವರುಣಾದಲ್ಲೇ ಇರುತ್ತೇನೆ. ವರುಣದಲ್ಲಿ ಸ್ಪರ್ಧಿಸಬಯಸಿ ಎ.19ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಬಿಜೆಪಿ ಹಾಗೂ ಜೆಡಿಎಸ್‌ ಎರಡೂ ಪಕ್ಷಗಳು ಸೇರಿಕೊಂಡು ನನ್ನನ್ನು ರಾಜಕೀಯವಾಗಿ ಮುಗಿಸಬೇಕೆಂದು ಹೊರಟಿವೆ. ಇಬ್ಬರಿಗೂ ನಾನೇ ಟಾರ್ಗೆಟ್‌. ಹೀಗೆ ನನ್ನನ್ನು ಟಾರ್ಗೆಟ್‌ ಮಾಡುತ್ತಿದ್ದಾರಲ್ಲ, ಈ ನಾಡಿಗೆ ನಾನು ಮಾಡಿರುವ ಅನ್ಯಾಯವಾದರೂ ಏನು?

-ಸಿದ್ದರಾಮಯ್ಯ

Advertisement
Advertisement

Udayavani is now on Telegram. Click here to join our channel and stay updated with the latest news.

Next