Advertisement

ಈಶ್ವರಪ್ಪ ನಾನು ವೈಯಕ್ತಿಕವಾಗಿ ಉತ್ತಮ ಸ್ನೇಹಿತರು, ರಾಜಕೀಯ ಸಿದ್ಧಾಂತ ಮಾತ್ರ ಬೇರೆ : ಸಿದ್ದು

04:01 PM Sep 30, 2020 | sudhir |

ಬೆಂಗಳೂರು : ಕುರುಬ ಸಮುದಾಯವನ್ನು ಎಸ್ಟಿ ಗೆ ಸೇರಿಸುವ ವಿಚಾರದಲ್ಲಿ ಸಾಕಷ್ಟು ಗೊಂದಲಗಲಿದ್ದು ಈಶ್ವರಪ್ಪ ಅವರು ಮೊದಲು ಇದನ್ನು ಸರಿ ಪಡಿಸಲಿ, ಈಶ್ವರಪ್ಪ ನಾನು ವೈಯುಕ್ತಿಕವಾಗಿ ಉತ್ತಮ ಸ್ನೇಹಿತರು ಆದರೆ ರಾಜಕೀಯ ಸಿದ್ಧಾಂತ ಮಾತ್ರ ಬೇರೆಬೇರೆ ಎಂದು ಈಶ್ವರಪ್ಪ ಅವರಿಗೆ ಸಿದ್ದರಾಮಯ್ಯ ಟಾಂಗ್ ನೀಡಿದರು.

Advertisement

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ಶಿರಾ ಹಾಗೂ ರಾಜರಾಜೇಶ್ವರಿ ನಗರಕ್ಕೆ ಈಗಾಗಲೇ ಚುನಾವಣೆ ದಿನಾಂಕ ನಿಗದಿಯಾಗಿದ್ದು ಎರಡೂ ಕ್ಷೇತ್ರಗಳಿಗೆ ಕಾಂಗ್ರೆಸ್ ನಿಂದ ಅಭ್ಯರ್ಥಿಗಳನ್ನು ಸ್ವತಂತ್ರವಾಗಿ ನಿಲ್ಲಿಸುವ ಆಲೋಚನೆಯನ್ನು ಮಾಡಿದ್ದು ಅಭ್ಯರ್ಥಿಗಳ ಆಯ್ಕೆಯನ್ನು ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಶಿರಾ ಹಾಗೂ ಆರ್.ಆರ್.ನಗರಕ್ಕೆ ಉಪಚುನಾವಣೆ ನಡೆಯುತ್ತಿದೆ ಈ ಹಿಂದೆ ಶಿರಾದಿಂದ ಸತ್ಯನಾರಾಯಣ್ ಗೆದ್ದಿದ್ದರು ಅವರ ನಿಧನದಿಂದ ಅಲ್ಲಿ ಚುನಾವಣೆ ನಡೆಯಲಿದೆ ಹಾಗೆಯೆ ಆರ್.ಆರ್.ನಗರದಿಂದ ಮುನಿರತ್ನ ರಾಜೀನಾಮೆ ಕೊಟ್ಟಿದ್ದರು ಹಾಗಾಗಿ ಎರಡೂ ಕ್ಷೇತ್ರಕ್ಕೂ ಚುನಾವಣೆ ನಡೆಯಲಿದ್ದು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದರು.

ಶಿರಾದಿಂದ ಜಯಚಂದ್ರ ಅವರನ್ನು ಅಭ್ಯರ್ಥಿಯಾಗಿ ಮಾಡುತ್ತೇವೆ ಹಾಗೆಯೆ ಆರ್.ಆರ್.ನಗರಕ್ಕೂ ನಮ್ಮ ಅಭ್ಯರ್ಥಿಯನ್ನು ಹಾಕುತ್ತೇವೆ ಕಾಂಗ್ರೆಸ್ ಗೆ ಅಭ್ಯರ್ಥಿಗಳ ಕೊರತೆಯಿಲ್ಲ ಒಂದೊಂದು ಕ್ಷೇತ್ರದಲ್ಲಿ ಎಂಟು ಮಂದಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next