Advertisement

ಮದುವೆ ದಿನದಂದು ಕಾಫಿದೊರೆ ಸಿದ್ದಾರ್ಥ ಹೆಗ್ಗಡೆ ಅವರಿಗೆ ನುಡಿ ನಮನ ಸಲ್ಲಿಸಿದ ಮದುಮಗ

04:37 PM Jan 25, 2022 | Team Udayavani |

ಕೊಟ್ಟಿಗೆಹಾರ: ಉದ್ಯೋಗ ನೀಡಿ ಉತ್ತಮ ಬದುಕು ಕಟ್ಟಿಕೊಳ್ಳಲು ಕಾರಣರಾದ ಸಿದ್ದಾರ್ಥ ಹೆಗ್ಗಡೆ ಅವರನ್ನು ಯುವಕನೊಬ್ಬ ತನ್ನ ಮದುವೆಯ ದಿನ ವೇದಿಕೆಯಲ್ಲಿ ಸಿದ್ದಾರ್ಥ ಹೆಗ್ಗಡೆ ಅವರಿಗೆ ನುಡಿನಮನ ಸಲ್ಲಿಸಿದ್ದಾನೆ.

Advertisement

ಮೂಡಿಗೆರೆ ತಾಲ್ಲೂಕಿನ ನಿಡ್ನಳ್ಳಿ ಸಮೀಪದ ಹೊಳೆಕೂಡಿಗೆಯ ಸಂತೋಷ್ ಹಾಗೂ ಬಾಳೆಹೊನ್ನೂರು ಗಡಿಗೇಶ್ವರದ ಪ್ರಮೀತಾ ಅವರ ವಿವಾಹದ ಹಿನ್ನಲೆಯಲ್ಲಿ ಮದುಮಗ ಸಂತೋಷ್ ಅವರ ಮನೆ ಹೊಳೆಕೂಡಿಗೆಯಲ್ಲಿ ಮಂಗಳವಾರ ಮೆಹಂದಿ ಶಾಸ್ತ್ರ ನಡೆದಿದ್ದು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಸಿದ್ದಾರ್ಥ ಹೆಗ್ಗಡೆ ಅವರ ಭಾವಚಿತ್ರವನ್ನು ಇಟ್ಟು ಪುಷ್ಪನಮನ ಹಾಗೂ ನುಡಿನಮನವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮದುಮಗ ಸಂತೋಷ್, ಬಡಕುಟುಂಬದಿಂದ ಬಂದ ನನಗೆ ಸಿದ್ದಾರ್ಥ ಹೆಗ್ಗಡೆ ಅವರು ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಕೊಟ್ಟ ಕಾರಣದಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾದ್ಯವಾಯಿತು ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸಂಜಯಗೌಡ, ಪರೀಕ್ಷಿತ್ ಗೌಡ ಮುಂತಾದವರು ಆಗಮಿಸಿ ಸಿದ್ದಾರ್ಥ ಹೆಗ್ಗಡೆ ಅವರ ಭಾವಚಿತ್ರಕ್ಕೆ ನುಡಿನಮನ ಸಲ್ಲಿಸಿದರು.

ಇದನ್ನೂ ಓದಿ : ಮುತ್ತಿನ ಪ್ರಕರಣ: ಗೆರೆ ಕೃತ್ಯಕ್ಕೆ ಶಿಲ್ಪಾ ಶೆಟ್ಟಿ’ಸಂತ್ರಸ್ತೆ’ ಎಂದ ಮುಂಬೈ ಕೋರ್ಟ್

Advertisement
Advertisement

Udayavani is now on Telegram. Click here to join our channel and stay updated with the latest news.

Next