Advertisement

ಸಿದ್ಧಾರ್ಥ ಆತ್ಮಹತ್ಯೆ:ಅಂತಿಮ ವರದಿ ಉಲ್ಲೇಖ

12:38 AM Aug 26, 2019 | Sriram |

ಮಂಗಳೂರು: ಕೆಫೆ ಕಾಫಿ ಡೇ ಮಾಲಕ ಸಿದ್ಧಾರ್ಥ ಅವರದ್ದು ಆತ್ಮಹತ್ಯೆ ಎಂದು ಪ್ರಕರಣದ ತನಿಖಾಧಿಕಾರಿಗೆ ಸಲ್ಲಿಸಿದ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್‌) ವರದಿಯಲ್ಲಿ ಹೇಳಲಾಗಿದೆ.

Advertisement

ಎಫ್‌ಎಸ್‌ಎಲ್‌ ವರದಿ ಕಳೆದ ಸೋಮವಾರ ಮರಣೋತ್ತರ ಪರೀಕ್ಷೆ ನಡೆಸಿದ ಫೊರೇನ್ಸಿಕ್‌ ತಜ್ಞರ ಕೈಸೇರಿತ್ತು. ಬಳಿಕ ಅವರು ಅಂತಿಮ ವರದಿಯನ್ನು ಪ್ರಕರಣದ ತನಿಖಾಧಿಕಾರಿಗೆ ಶುಕ್ರವಾರ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಳ್ಳಾಲ ನೇತ್ರಾವತಿ ನದಿಗೆ ಹಾರಿದ್ದ ಸಿದ್ಧಾರ್ಥ ಶವ ಎರಡು ದಿನಗಳ ಬಳಿಕ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಪರೀಕ್ಷಾ ವರದಿಯನ್ನು ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.

ಈ ಮಧ್ಯೆ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಪ್ರಕರಣದ ತನಿಖಾಧಿಕಾರಿಗೆ ಸಲ್ಲಿಕೆಯಾಗಿದ್ದು, ಅದರಲ್ಲಿ ನೀರಿಗೆ ಬಿದ್ದು ಉಸಿರುಗಟ್ಟಿ ಸಾವು ಎಂದು ಉಲ್ಲೇಖೀಸಲಾಗಿತ್ತು. ಈಗ ಮರಣೋತ್ತರ ಪರೀಕ್ಷಾ ವರದಿ ಕೂಡ ತನಿಖಾಧಿಕಾರಿಗೆ ಸಲ್ಲಿಕೆಯಾಗಿದೆ ಎಂದು ತಿಳಿದುಬಂದಿದೆ.

 

Advertisement

Udayavani is now on Telegram. Click here to join our channel and stay updated with the latest news.

Next