Advertisement

ಸಿದ್ದೇಶ್ವರ ಶ್ರೀಗಳು ನಡೆದಾಡುವ ದೇವರು –ಬೊಮ್ಮಾಯಿ

10:54 AM Dec 06, 2021 | Team Udayavani |

ಭಾಲ್ಕಿ: ವಿಜಯಪುರ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ನಡೆದಾಡುವ ದೇವರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

ಪಟ್ಟಣದ ಚನ್ನಬಸವಾಶ್ರಮದಲ್ಲಿ ಸೋಮವಾರ ನಡೆದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಪ್ರವಚನ ಕಾರ್ಯಕ್ರಮದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳ ಪ್ರವಚನ ಆಲಿಸಲು ಬಂದವನು ನಾನು, ಇಲ್ಲಿ ಮಾತನಾಡಲು ನನಗೆ ಏನೂ ಇಲ್ಲ. ಸಿದ್ದೇಶ್ವರ ಅಪ್ಪನವರ ಮಾತು ನಿಮ್ಮ ಹೃದಯ ತುಂಬಿದೆ. ತುಂಬಿದ ಹೃದಯದಲ್ಲಿ ನನ್ನ ಮಾತು ಬೇಕಿಲ್ಲ. ಪೂಜ್ಯರ ಮಾತುಗಳೇ ನನಗೆ ಪ್ರೇರಣೆ. ನನ್ನ ಹೃದಯ ಅಂತರಾಳದ ಪರಮ ಹೂಗಳು ಅವರ ಮಾತುಗಳು. ಅವರ ಮಾತುಗಳು ಪ್ರತಿನಿತ್ಯ ನನ್ನ ಜೀವನದಲ್ಲಿ ಅಳವಡಿಸಿಕೊಳ್ಳಲು ನಾನು ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ಹಿರೇಮಠ ಸಂಸ್ಥಾನದ ಹಿರಿಯ ಸ್ವಾಮೀಜಿಗಳೂ ಆದ ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಡಾ| ಬಸವಲಿಂಗ ಪಟ್ಟ ದೇವರು ಸಾನಿಧ್ಯವಹಿಸಿ ಮಾತನಾಡಿದರು. ಕೇಂದ್ರ ಮಂತ್ರಿ ಭಗವಂತ ಖೂಬಾ, ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ವೇದಿಕೆಯಲ್ಲಿ ಉಪಸ್ಥಿತರಿದ್ದು ಶ್ರೀಮಠದಿಂದ ಸನ್ಮಾನ ಸ್ವೀಕರಿಸಿದರು.

ಇದನ್ನೂ ಓದಿ:ಪಾಟೀಲ ಗೆಲ್ಲಿಸಿ ಪಕ್ಷ ಬಲಪಡಿಸಲು ಶ್ರಮಿಸಿ: ಸಿದ್ದಾಜಿ

Advertisement

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಬಿಜೆಪಿ ಯುವ ಮುಖಂಡ ಡಿ.ಕೆ.ಸಿದ್ರಾಮ, ಡಾ| ಶೈಲೇಂದ್ರ ಬೆಲ್ದಾಳೆ, ಬಾಬು ವಾಲಿ, ಬಸವರಾಜ ಧನ್ನೂರ, ಮಾರುತಿರಾವ ಮುಳೆ, ಸೂರ್ಯಕಾಂತ ನಾಗಮಾರಪಳ್ಳಿ ಸೇರಿದಂತೆ ವಿವಿಧ ಮಠಗಳ ಪೀಠಾಧ್ಯಕ್ಷರು ಉಪಸ್ತಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next