Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಬಾದಾಮಿಗೆ ಬಂದು ಸ್ಪರ್ಧಿಸುತ್ತಾರೆ ಎಂಬುದು ವದಂತಿ. ಅವರಿಗೆ ಈ ಭಾಗದ ಚುನಾವಣೆ ರುಚಿಸುವುದಿಲ್ಲ ಎಂದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೇಲಿದ್ದ ಎಲ್ಲ ಪ್ರಕರಣಗಳು ಖುಲಾಸೆಯಾಗಿವೆ. ಆದರೂ ಅವರ ವಿರುದ್ಧ ಸಿಎಂ ಹಗುರವಾಗಿ ಮಾತನಾಡಿದ್ದಾರೆ. ಆ ಮೂಲಕ ನ್ಯಾಯಾಲಯ ವ್ಯವಸ್ಥೆಗೆ ಅಗೌರವ ತೋರಿಸಿದ್ದಾರೆ. ಸಿಎಂ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಹಿರಿಯ ವಕೀಲರೊಂದಿಗೆ ಚರ್ಚಿಸಿದ್ದು, ಇದಕ್ಕೆ ಅಮಿತ್ ಶಾ ಅವರ ಅನುಮತಿ ಬೇಕು. ಅವರ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.
ಬಾಗಲಕೋಟೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ,ರಾಹುಲ್ ಗಾಂಧಿಗೆ ಮೆಚ್ಯುರಿಟಿ ಆಗಿಲ್ಲ. ಹೀಗಾಗಿ ತಮಗೆ ಇರುವ ಅಲ್ಪ-ಸ್ವಲ್ಪ ಗೌರವವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿಶ್ವದ ವಿವಿಧ ರಾಷ್ಟ್ರಗಳು ಮೋದಿ ಅವರನ್ನು ಹಾಗೂ ಭಾರತವನ್ನು ಹೊಗಳುತ್ತಿವೆ. ಆದರೆ, ರಾಹುಲ್ ಗಾಂಧಿ, ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಕೊಡುತ್ತಿದ್ದಾರೆ. ಇದು ಅವರು ಪ್ರಬುದ್ಧತೆ ಇಲ್ಲದವರು ಎಂಬುದನ್ನು ತೋರಿಸುತ್ತದೆ ಎಂದು ಟೀಕಿಸಿದರು. ಬಿಎಸ್ವೈ ಎದುರೇ ಭಿನ್ನಮತ ಸ್ಫೋಟ
ಬಾಗಲಕೋಟೆ: ಜಿಲ್ಲೆಯ ಹುನಗುಂದ ಮತ್ತು ಜಮಖಂಡಿ ಬಿಜೆಪಿಯಲ್ಲಿ ಬಹು ದಿನಗಳಿಂದ ಹೊಗೆಯಾಡುತ್ತಿದ್ದ ಪಕ್ಷದ ಮುಖಂಡರ ಭಿನ್ನಮತ ಗುರುವಾರ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಎದುರೇ ಸ್ಫೋಟಗೊಂಡಿದೆ.
Related Articles
Advertisement