Advertisement

ಸಿದ್ದು-ವಿಶ್ವನಾಥ್‌ ಮುನಿಸು 23ರ ಬಳಿಕ ಸರಿ ಹೋಗಲಿದೆ: ಇಬ್ರಾಹಿಂ

11:25 PM May 14, 2019 | Lakshmi GovindaRaj |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ನ‌ಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅವರಿಬ್ಬರೂ 35 ವರ್ಷದ ಸ್ನೇಹಿತರು ಎಂದು ವಿಧಾನಪರಿಷತ್‌ ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಇಬ್ಬರ ನಡುವೆ ನಡೆಯುತ್ತಿರುವುದು ತೋರಿಕೆಯ ಕಲಹ. ಮೇ 23ರಂದು ಫ‌ಲಿತಾಂಶ ಬಂದ ನಂತರ ಎಲ್ಲವೂ ಸರಿ ಹೋಗಲಿದೆ. ಆಗ ನಿಮಗೇ ಗೊತ್ತಾಗುತ್ತದೆ ಎಂದು ತಿಳಿಸಿದರು.

ಯಡಿಯೂರಪ್ಪ ಒಳ್ಳೆಯವರು. ಆದರೆ, ಅವರು ಇರುವ ಪಕ್ಷ ಸರಿ ಇಲ್ಲ. ಮೇ 23ರಂದು ಫ‌ಲಿತಾಂಶ ಹೊರ ಬೀಳುತ್ತಿದ್ದಂತೆ ಯಡಿಯೂರಪ್ಪ ಅವರೇ ಪಕ್ಷ ಬಿಟ್ಟು ಹೊರಗೆ ಬರುತ್ತಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next