Advertisement

ಸಿದ್ದು-ಬಿಎಸ್‌ವೈ ರಹಸ್ಯ ಮಾತುಕತೆ

12:35 AM Feb 26, 2019 | Team Udayavani |

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಕಾವೇರಿದ ಬೆನ್ನಲ್ಲೇ ಹಾವು, ಮುಂಗುಸಿಯಂತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೋಮವಾರ ಬೆಳಗ್ಗೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುಮಾರು 20 ನಿಮಿಷಗಳ ಕಾಲ ತಮ್ಮ ಬೆಂಬಗಲಿಗರನ್ನು ಹೊರ ಕಳುಹಿಸಿ ರಹಸ್ಯ ಮಾತುಕತೆ ನಡೆಸಿದ್ದಾರೆ. 

Advertisement

ಬೆಂಗಳೂರಿನಿಂದ ಇಂಡಿಗೋ ವಿಮಾನದಲ್ಲಿ ನಗರಕ್ಕೆ ಆಗಮಿಸಿದ ಉಭಯ ನಾಯಕರು, ಇಲ್ಲಿನ ನಿಲ್ದಾಣದ ವಿವಿಐಪಿ ಲಾಂಜ್‌ನಲ್ಲಿ ಮಾತುಕತೆ ನಡೆಸಿದ್ದಾರೆ. ಉಪಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌ ಅವರಿಗೆ ಆರು ತಿಂಗಳಾದರೂ ಮುಖ್ಯಮಂತ್ರಿ ಪಟ್ಟ ನೀಡಬೇಕಾಗಿತ್ತು. ನಾವು ದಲಿತರೊಬ್ಬರನ್ನು ರಾಷ್ಟ್ರಪತಿ ಮಾಡಿದ್ದೇವೆಂದು ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಮ್ಮ ಹೈಕಮಾಂಡ್‌ ಹೇಗೆ ಹೇಳುತ್ತೋ ಹಾಗೇ ನಾವು ಕೇಳುತ್ತೇವೆ. ನನ್ನ ಕೈಯಲ್ಲಿ ಏನೂ ಇಲ್ಲ ಎಂದಿದ್ದಾರೆ ಎನ್ನಲಾಗಿದೆ. ಲೋಕಸಭೆ ಚುನಾವಣೆ ನಂತರ ಕಾದು ನೋಡಿ, ಏನಾಗುತ್ತದೆ ಎಂದು ಯಡಿಯೂರಪ್ಪ ಹೇಳಿದ್ದು, ಇದಕ್ಕೆ ಸಿದ್ದರಾಮಯ್ಯ ಅವರು ನಾನೂ ಲೋಕಸಭೆ ಚುನಾವಣೆಗೆ ಕಾಯುತ್ತಿದ್ದೇನೆ ಎಂದು ಹೇಳಿದರು ಎನ್ನಲಾಗಿದೆ.
 

Advertisement

Udayavani is now on Telegram. Click here to join our channel and stay updated with the latest news.

Next