Advertisement

ಸಿದ್ದು-ದೇವೇಗೌಡ ಮತ್ತೆ ಕಿತ್ತಾಡುತ್ತಾರೆ: ಸಿ.ಟಿ.ರವಿ

06:35 AM Oct 21, 2018 | Team Udayavani |

ಬೆಂಗಳೂರು:ಈ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಠಿಣ ಶಬ್ಧಗಳಿಂದ ಟೀಕಿಸಿದ್ದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ಇದೀಗ ಪ್ರಧಾನಿ ನರೇಂದ್ರ ಮೋದಿಯವರ ಭಯದಿಂದಾಗಿ ಒಂದೇ ವೇದಿಕೆ ಹಂಚಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತೆ ಕಿತ್ತಾಡಿಕೊಂಡು ದೂರವಾಗಲಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ಲೇವಡಿ ಮಾಡಿದ್ದಾರೆ.

Advertisement

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಘೋಷಣೆಗೂ ಮುನ್ನ ಸಿದ್ದರಾಮಯ್ಯ ಅವರ ಬಗ್ಗೆ ಇಂತಹ ನೀಚ ಮುಖ್ಯಮಂತ್ರಿಯನ್ನು ಎಂದೂ ಕಂಡಿಲ್ಲ. ಇಂತಹ ವ್ಯಕ್ತಿಯನ್ನು ಬೆಳೆಸಿ ತಪ್ಪು ಮಾಡಿದೆ ಎಂದು ಎಚ್‌.ಡಿ.ದೇವೇಗೌಡರು ಕಿಡಿ ಕಾರಿದ್ದರು. ಆದರೆ ಪ್ರಧಾನಿ ಮೋದಿಯವರ ವರ್ಚಸ್ಸು ಅವರಲ್ಲಿ ಭಯ ಹುಟ್ಟಿಸಿದೆ. ಏಕಾಂಗಿಯಾಗಿ ಬಿಜೆಪಿಯನ್ನು ಮಣಿಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್‌- ಜೆಡಿಎಸ್‌ ಒಂದಾಗಿವೆ ಎಂದು ದೂರಿದರು.

ಭವಿಷ್ಯದಲ್ಲಿ ಸಂಕಷ್ಟಕ್ಕೆ ಸಿಲುಕುವ ಭೀತಿಯಿಂದ ದೇವೇಗೌಡರು ಹಾಗೂ ಸಿದ್ದರಾಮಯ್ಯ ಅವರು ಈಗ ಒಂದಾಗಿದ್ದಾರೆ. ಈ ಹೊಂದಾಣಿಕೆ ಹೆಚ್ಚು ದಿನ ಇರುವುದಿಲ್ಲ. ಮುಖವಾಡ ಹಾಕಿಕೊಂಡು ಹೆಚ್ಚು ಕಾಲ ನಿಜ ಜೀವನದಲ್ಲಿ ಬದುಕು ನಡೆಸಲು ಸಾಧ್ಯವಿಲ್ಲ. ಅತಿ ಶೀಘ್ರವಾಗಿ ಕಚ್ಚಾಡಿಕೊಂಡು ದೂರಾಗಲಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next