Advertisement

ಯುವಕನಿಗೆ ಸಿದ್ದು ಗುದ್ದು

05:48 AM Feb 09, 2019 | Team Udayavani |

ಮೈಸೂರು: ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಮಾನಿಗಳಿಂದ ಕಿರಿಕಿರಿ ಅನುಭವಿಸಬೇಕಾಯಿತು. ವೇದಿಕೆ ಹತ್ತಲೂ ಬಿಡದೆ ಅವರೊಂದಿಗೆ ಸೆಲ್ಫಿಗೆ ಮುಗಿ ಬೀಳುತ್ತಿದ್ದವರಿಗೆ ಗದರಿ ಕಳುಹಿಸಿದರು.

Advertisement

ಉದ್ಘಾಟನೆ ಕಾರ್ಯಕ್ರಮದ ನಂತರವು ಈ ಕಿರಿಕಿರಿ ತಪ್ಪಲಿಲ್ಲ. ಇದರಿಂದ ಹತ್ತಿರದಿಂದ ಸೆಲ್ಫಿ ತೆಗೆದುಕೊಳ್ಳಲು ಬಂದ ಯುವಕನಿಗೆ ಸಿದ್ದರಾಮಯ್ಯ ಗುದ್ದಿ ಕಳುಹಿಸಿದರು. ಕನಕ ಸಮುದಾಯ ಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬಡವರು ಮಕ್ಕಳ ಮದುವೆ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.

ಹೀಗಾಗಿ ನನ್ನನ್ನು ಗೆಲ್ಲಿಸಿರುವ ಬಾದಾಮಿಯಲ್ಲಿ ಮುಂದಿನ ವರ್ಷ 500 ಜೋಡಿಗಳಿಗೆ ದಾನಿಗಳಿಂದ ಸಾಮೂಹಿಕ ವಿವಾಹ ಮಾಡಿಸಲು ಉದ್ದೇಶಿಸಿದ್ದೇನೆ ಎಂದು ತಿಳಿಸಿದರು. ಕಾಗಿನೆಲೆ ಕನಕಗುರುಪೀಠದ ನಿರಂಜನಾನಂದಪುರಿ ಶ್ರೀ ಮಾತನಾಡಿ, ಸರ್ಕಾರದ ಜೀವ‌ವೇ ಸಿದ್ದರಾಮಯ್ಯ ಕೈಯಲ್ಲಿದೆ. ಮನಸ್ಸು ಮಾಡಿದರೆ ಒಂದು ಕ್ಷಣದಲ್ಲಿ ಸರ್ಕಾರ ಉರುಳಿಸಬಹುದು. ಆದರೆ, ಹಾಲಮತದಲ್ಲಿ ಹುಟ್ಟಿದ ಸಿದ್ದರಾಮಯ್ಯ ಅವರು ಅಂತಹ ಕಾರ್ಯ ಮಾಡಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next