Advertisement

ಸಿದ್ದು-ಖರ್ಗೆ ಈಗಲೂ ನಮ್ಮ ನಾಯಕರು

10:27 PM Dec 31, 2019 | Team Udayavani |

ಗೋಕಾಕ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಈಗಲೂ ನಮ್ಮ ನಾಯಕರು ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಮಂಗಳವಾರ ತಾಲೂಕಿನ ಬೆನಚಿಮರಡಿಯಲ್ಲಿ ಗ್ರಾಮಸ್ಥರು ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ನಾವು ಎಲ್ಲಿಯೇ ಇದ್ದರೂ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ನಮ್ಮ ನಾಯಕರು. ಇದನ್ನು ಬಹಿರಂಗವಾಗಿಯೇ ಹೇಳುತ್ತೇನೆ. ಇದನ್ನು ಹೇಳಲು ನನಗೆ ಯಾರ ಭಯವೂ ಇಲ್ಲ. ಸಿದ್ದರಾಮಯ್ಯ ಒಳ್ಳೆಯ ಮನುಷ್ಯರು. ನಾವು ಅವರು ಬೇರೆ ಬೇರೆ ಪಕ್ಷಗಳಿಗೆ ಹೋಗಿದ್ದು ದುರ್ದೈವದ ಸಂಗತಿ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next