Advertisement

ದೇಶದ ಅಭಿವೃದ್ಧಿಗೆ ಗುಣಮಟ್ಟದ ಶಿಕ್ಷಣ ಅವಶ್ಯ : ಸಿದ್ದು ಸವದಿ

08:53 PM Jul 29, 2022 | Team Udayavani |

ರಬಕವಿ-ಬನಹಟ್ಟಿ : ದೇಶದ ಅಭಿವೃದ್ಧಿಗೆ ಗುಣಮಟ್ಟದ ಶಿಕ್ಷಣ ಅವಶ್ಯ. ಆ ನಿಟ್ಟಿನಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಎಂದು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ಸಿದ್ದು ಸವದಿ ಹೇಳಿದರು.

Advertisement

ಅವರು ರಾಮಪುರದ ಸರಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಪಂಚಾಯತ ಬಾಗಲಕೋಟೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಜಮಖಂಡಿ ಇವರ ಆಶ್ರಯದಲ್ಲಿ ಪೂರಕ ಪೌಷ್ಠಿಕ ಆಹಾರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ ಕರ್ನಾಟಕ ಸರಕಾರ ಪ್ರಾರಂಭಿಸಿರುವ ಮಹತ್ವದ ಯೋಜನೆ ಇದಾಗಿದೆ. ಇದ್ದರಿಂದ ಕಡ್ಡಾಯ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಮಕ್ಕಳು ಮೊಟ್ಟೆ, ಶೇಂಗಾ ಚಿಕ್ಕಿ, ಬಾಳೆಹಣ್ಣುಗಳಂತಹ ಪೌಷ್ಟಿಕ ಆಹಾರ ಪಡೆದುಕೊಂಡು ಆರೋಗ್ಯವಂತರಾಗಬೇಕು. ಸರಕಾರ ಮಕ್ಕಳ ಆರೋಗ್ಯಕ್ಕೆ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲ್ಯಾಘನೀಯ. ಇದೊಂದು ಉಪಯುಕ್ತ ಯೋಜನೆ ಇದಾಗಿದೆ. ಶಾಲೆ ಜೀವಂತ ದೇವರ ಗುಡಿ, ಅದರ ಅಭಿವೃದ್ಧಿಗೆ ಸಂಘ ಸಂಸ್ಥೆಗಳು ಮುಂದಾಗಬೇಕು. ಮಕ್ಕಳಿಗೆ ರಾಷ್ಟ್ರೀಯತೆ, ರಾಷ್ಟ್ರ ಪ್ರೇಮ ಬೆಳೆಸುವ ಕೆಲಸವಾಗಬೇಕು. ಕಾರ್ಯಕ್ರಮ ಯಶಸ್ವಿಗೆ ನಾವು ಸಹಕರಿಸೋಣ ಎಂದರು.

ಜಿಲ್ಲಾ ಅಕ್ಷರ ದಾಸೋಹ ಯೋಜನೆ ಎ. ಕೆ. ಬಸನ್ನವರ ಮಾತನಾಡಿ, ವಾರದಲ್ಲಿ ಎರಡು ದಿನ ಪೌಷ್ಠಿಕ ಆಹಾರವನ್ನು ನೀಡಲಾಗುತ್ತಿದ್ದು, ಶೈಕ್ಷಣಿಕ ವರ್ಷದಲ್ಲಿ ೪೬ ಮೊಟ್ಟೆಗಳನ್ನು ವಿತರಿಸಲಾಗುತ್ತದೆ. ಮಕ್ಕಳು ಪೌಷ್ಟಿಕತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ ಪೌಷ್ಟಿಕ ಆಹಾರವನ್ನು ನೀಡಲಾಗುತ್ತಿದೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಎಸ್ ಡಿ ಎಂ ಸಿ ಅದ್ಯಕ್ಷ ಶ್ರೀಶೈಲ ಹಂದಿಗುಂದ, ಬಸಪರಪ್ಪ ಹಟ್ಟಿ, ಶಿಕ್ಷಣಾಧಿಕಾರಿ ಸಿ. ಎಂ. ನೇಮಗೌಡ, ಜಮಖಂಡಿಯ ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಸಿ. ಎಸ್. ಕಲ್ಯಾಣಿ, ನಗರಸಭೆ ಅಧ್ಯಕ್ಷ ಸಂಜಯ ತೆಗ್ಗಿ, ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಬಿ. ಎಸ್. ಕಡಕೋಳ, ಆರ್. ಎಂ. ಸಂಪಗಾಂವಿ, ಶ್ರೀಶೈಲ ಬುರ್ಲಿ, ಬಾಬಾಗೌಡ ಪಾಟೀಲ, ಪರಪ್ಪ ಬಿಳ್ಳೂರ, ಶ್ರೀಶೈಲ ಆಲಗೂರ, ವಿಜಯ ಕಲಾಲ, ಎಂ. ಎಂ. ಹೊಸಮನಿ, ರವಿ ಕೊರ್ತಿ, ಪ್ರಕಾಶ ಸಿಂಗನ, ಅರ್ಜುನ ಕಾಖಂಡಕಿ, ಎಸ್. ಎಂ. ಹಳೆಮನಿ, ಸಂತೋಷ ಬಡ್ಡಿ, ಸುನೀಲ ವಜ್ರಮಟ್ಟಿ, ಯಲ್ಲಪ್ಪ ತಳವಾರ, ಜಗದೀಶ ಕುಳ್ಳೋಳ್ಳಿ ಸೇರಿದಂತೆ ಶಾಲಾ ಮುಖ್ಯಗುರುಗಳು ಶಿಕ್ಷಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next