Advertisement

ಅಧಿಕಾರಕ್ಕೆ ಬಂದ 24 ತಾಸಲ್ಲಿ ಸಿದ್ದು ಟೀಂ ಜೈಲಿಗೆ: ಬಿಎಸ್‌ವೈ

06:40 AM Apr 29, 2018 | Team Udayavani |

ಹುಬ್ಬಳ್ಳಿ: ಬಿಜೆಪಿ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆ್ಯಂಡ್‌ ಗ್ಯಾಂಗ್‌ ಮಾಡಿರುವ ಹಗರಣಗಳನ್ನು ಬಯಲಿಗೆಳೆದು ಅವರೆಲ್ಲರನ್ನೂ ಜೈಲಿಗೆ ಕಳುಹಿಸುತ್ತೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಘೋಷಿಸಿದ್ದಾರೆ.

Advertisement

ಕುಂದಗೋಳದಲ್ಲಿ ಶನಿವಾರ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಅವರು,ಸಿದ್ದರಾಮಯ್ಯ ವಿರುದಟಛಿ ಟೀಕಾಪ್ರಹಾರ ನಡೆಸಿದರು.

ಸಿದ್ದರಾಮಯ್ಯನವರು ಕಳೆದ ಐದು ವರ್ಷಗಳಲ್ಲಿ ರಾಜ್ಯದ ಖಜಾನೆಯನ್ನು ಲೂಟಿ ಮಾಡಿದ್ದಾರೆ. ಯೋಜನೆಗೆ ಹೆಚ್ಚುವರಿ ಹಣ ನೀಡಿ ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಮಹಾಭ್ರಷ್ಟ ಸರಕಾರವಿದು. ಅಧಿಕಾರ ಸ್ವೀಕರಿಸಿದ 24 ಗಂಟೆಯಲ್ಲೇ ಅವರ ಹಗರಣಗಳನ್ನು ಬಯಲಿಗೆಳೆದು ಜೈಲಿಗಟ್ಟುತ್ತೇನೆ ಎಂದರು. ತಾವೇ ಸತ್ಯ ಹರಿಶ್ಚಂದ್ರನಂತೆ ಮಾತನಾಡುವ ಸಿದ್ದರಾಮಯ್ಯ ಲಕ್ಷಗಟ್ಟಲೇ ಬೆಲೆಬಾಳುವ ವಾಚ್‌ ಕೊಟ್ಟಿದ್ದು ಯಾರು? ಎಂಬುವುದನ್ನು ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.

ಪ್ರಮಾಣ ವಚನ ಸ್ವೀಕರಿಸುತ್ತೇವೆ: ಮೇ 15ರಂದು ಮತ ಎಣಿಕೆ ಮುಗಿಯುತ್ತದೆ. ಮೇ 18ರೊಳಗೆ ಯಾವುದಾದರೂ ಒಂದು ದಿನ ಪ್ರಧಾನಿ ನರೇಂದ್ರ ಮೋದಿಯವರ ಸಮಯ ಪಡೆದು ಬೆಂಗಳೂರಿನ ಕಂಠೀರವ ಸ್ಟುಡಿಯೋ ಮೈದಾನದಲ್ಲಿ ಬೃಹತ್‌ ವೇದಿಕೆಯಲ್ಲಿ ನಾವೆಲ್ಲ ಪ್ರಮಾಣ ವಚನ ಸ್ವೀಕರಿಸುತ್ತೇವೆ ಎಂದರು.

ಪ್ರಧಾನಿ ಮೋದಿ, ಅಮಿತ್‌ ಶಾ, ಯೋಗಿ ಆದಿತ್ಯನಾಥ ಹೊರಗಿನವರು ಎಂದಿರುವ ಸಿದ್ದರಾಮಯ್ಯ, ರಾಹುಲ್‌ ಗಾಂಧಿ ಚಿಕ್ಕಪ್ಪನ ಮಗನೇ ಅಥವಾ ಸೋನಿಯಾ ಗಾಂಧಿ ಚಿಕ್ಕಮ್ಮನೇ ಎಂದು ಹೇಳಲಿ.
– ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

Advertisement
Advertisement

Udayavani is now on Telegram. Click here to join our channel and stay updated with the latest news.

Next