Advertisement

ಸಿದ್ದು  ಔತಣಕೂಟಕ್ಕೆ ಅತೃಪ್ತರ ಗೈರು

06:00 AM Jul 04, 2018 | Team Udayavani |

ಬೆಂಗಳೂರು: ವಿಧಾನಮಂಡಲ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಶಾಸಕರನ್ನು ಒಗ್ಗಟ್ಟಾಗಿ ಇಟ್ಟುಕೊಳ್ಳಲು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕರೆದಿದ್ದ ಔತಣಕೂಟಕ್ಕೆ ಸಂಪುಟದಲ್ಲಿ ಸ್ಥಾನ ಸಿಗದೆ ಮುನಿಸಿಕೊಂಡ ಅತೃಪ್ತ ಶಾಸಕರು ಗೈರು ಹಾಜರಾಗಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

Advertisement

ಹಿರಿಯ ನಾಯಕರಾಗಿರುವ ಎಚ್‌.ಕೆ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ರಾಮಲಿಂಗಾ ರೆಡ್ಡಿ, ರೋಶನ್‌ ಬೇಗ್‌, ಎಂ.ಕೃಷ್ಣಪ್ಪ, ಸಿ.ಎಸ್‌.ಶಿವಳ್ಳಿ, ಎಚ್‌.ಎಂ.ರೇವಣ್ಣ ಔತಣಕೂಟದಿಂದ ದೂರ ಉಳಿದಿದ್ದರು. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಶಾಮನೂರು ಶಿವಶಂಕರಪ್ಪ, ಡಾ| ಸುಧಾಕರ್‌, ಎಸ್‌.ಟಿ.ಸೋಮಶೇಖರ್‌, ಎಸ್‌.ಆರ್‌. ಪಾಟೀಲ್‌, ಬಂಗಾರಪೇಟೆ ನಾರಾಯಣಸ್ವಾಮಿ ಭೋಜನಕೂಟಕ್ಕೆ ಹಾಜರಾಗಿದ್ದರು. ಸಚಿವರಾದ ಡಿ.ಕೆ.ಶಿವಕುಮಾರ್‌, ಪ್ರಿಯಾಂಕ್‌ ಖರ್ಗೆ, ರಾಜಶೇಖರ ಪಾಟೀಲ್‌, ಕೃಷ್ಣ ಬೈರೇಗೌಡ, ಪುಟ್ಟರಂಗ ಶೆಟ್ಟಿ, ರಮೇಶ್‌ ಜಾರಕಿಹೊಳಿ, ಜಮೀರ್‌ ಅಹಮದ್‌ ಪಾಲ್ಗೊಂಡಿದ್ದರು. ಉಪ ಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ್‌ ತಡವಾಗಿ ಆಗಮಿಸಿ, ಬೇಗ ನಿರ್ಗಮಿಸಿದರು.

ಭೋಜನ ಕೂಟದಲ್ಲಿ ಹಾಜರಾಗಿದ್ದ ಶಾಸಕರು ಮತ್ತು ಸಚಿವರಿಗೆ ಎಲ್ಲರೂ ಚೆನ್ನಾಗಿ ಊಟ ಮಾಡಿ, ಯಾರೂ ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಬೇಡಿ ಎಂದು ಸಿದ್ದು ಮನವಿ ಮಾಡಿದರು ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next