Advertisement

ಸಿದ್ದುಗೆ ಸಿಗೋದು ಗೋಡಂಬಿ

06:50 AM Apr 23, 2018 | Team Udayavani |

ಮೈಸೂರು: ಬಾದಾಮಿಯಲ್ಲಿ ಸಿದ್ದರಾಮಯ್ಯ ಅವರಿಗೆ ಬಾದಾಮಿ ಸಿಗುವುದಿಲ್ಲ. ಗೋಡಂಬಿಯೇ ಅವರಿಗೆ ಸಿಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

Advertisement

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಜಿ.ಟಿ.ದೇವೇಗೌಡರ ಪರ ಪ್ರಚಾರ ನಡೆಸಲು ಆಗಮಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ಸಿದ್ದುಗೆ ಬಾದಾಮಿಯಲ್ಲಿ ಸೋಲು ಖಚಿತ. ಅಲ್ಲಿ ಅವರಿಗೆ ಬಾದಾಮಿ ಸಿಗುವುದಿಲ್ಲ, ಬದಲಿಗೆ ಗೋಡಂಬಿ ಸಿಗಲಿದೆ.

ಬಾದಾಮಿಯಲ್ಲಿ ಸಿದ್ದರಾಮಯ್ಯ ಸ್ಪರ್ಧಿಸೋಕೆ ನಮ್ಮ ಅಭ್ಯಂತರವಿಲ್ಲ. ಅಲ್ಲಿಯೂ ಸ್ಪರ್ಧಿಸಲಿ, ಜೆಡಿಎಸ್‌ನಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದೇವೆ. ಅಲ್ಲದೆ, ಸಿದ್ದರಾಮಯ್ಯ ಎಲ್ಲೇ ನಿಂತರೂ ಗೆಲ್ಲುವುದು ನಾವೇ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next