Advertisement

ಸಿಧು ಮೂಸೆವಾಲಾ ಹತ್ಯೆ: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಮಾಸ್ಟರ್ ಮೈಂಡ್

09:34 PM Jun 08, 2022 | Team Udayavani |

ನವದೆಹಲಿ: ತಮ್ಮ ವಶದಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಪಂಜಾಬಿ ಗಾಯಕ ಮತ್ತು ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ಮೈಂಡ್ ಎಂದು ದೆಹಲಿ ಪೊಲೀಸರು ಬುಧವಾರ (ಜೂನ್ 8) ಹೇಳಿದ್ದಾರೆ.

Advertisement

ಪ್ರಕರಣದಲ್ಲಿ ಮಹಾಕಾಲ್ ಅಲಿಯಾಸ್ ಸಿದ್ಧೇಶ್ ಹಿರಾಮನ್ ಕಾಂಬಳೆ ಎಂಬಾತನನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆದಾಗ್ಯೂ, ಇವರು ಗಾಯಕನ ಹತ್ಯೆಯಲ್ಲಿ ಭಾಗಿಯಾಗಿಲ್ಲ. “ಲಾರೆನ್ಸ್ ಬಿಷ್ಣೋಯ್ ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್. ಮಹಾರಾಷ್ಟ್ರ ಪೊಲೀಸರು ಮಹಾಕಾಲ್ ನನ್ನ 14 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದ್ದು, ಆತ ಶೂಟರ್‌ಗಳಲ್ಲಿ ಒಬ್ಬನ ನಿಕಟ ಸಹಚರರಾಗಿದ್ದಾನೆ , ಆದರೆ ಅವರು ಹತ್ಯೆಯಲ್ಲಿ ಭಾಗಿಯಾಗಿಲ್ಲ,”ಎಂದು ವಿಶೇಷ ಪೊಲೀಸ್ ಆಯುಕ್ತ ಎಚ್‌ಎಸ್ ಧಲಿವಾಲ್ ಎಎನ್ ಐ ಸುದ್ದಿ ಸಂಸ್ಥೆಗೆ ಹೇಳಿದ್ದಾರೆ.

ಮಹಾಕಾಲ್ ನನ್ನು ಪುಣೆಯಿಂದ ಬಂಧಿಸಲಾಗಿದೆ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಐವರು ಶಂಕಿತರನ್ನು ಗುರುತಿಸಲಾಗಿದೆ ಎಂದು ಧಲಿವಾಲ್ ಹೇಳಿದ್ದಾರೆ. ಹತ್ಯೆಯಲ್ಲಿ ಕನಿಷ್ಠ 5 ಜನರು ಭಾಗಿಯಾಗಿದ್ದಾರೆ ಎಂದು ಅವರು ಹೇಳಿದರು.

ಮೇ 29 ರಂದು ಮಾನ್ಸಾ ಜಿಲ್ಲೆಯ ಜವಾಹರ್ಕೆ ಗ್ರಾಮದಲ್ಲಿ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next