Advertisement

Sidlaghatta; ಚರಂಡಿಗೆ ಉರುಳಿದ ಸರಕಾರಿ ಬಸ್: ತಪ್ಪಿದ ಅವಘಡ

09:55 PM Sep 02, 2024 | Team Udayavani |

ಶಿಡ್ಲಘಟ್ಟ(ಚಿಕ್ಕಬಳ್ಳಾಪುರ): ಭಾರಿ ಮಳೆಯಿಂದಾಗಿ ತಾಲೂಕಿನ ಶಿಡ್ಲಘಟ್ಟ-ದಿಬ್ಬೂರಹಳ್ಳಿ ರಸ್ತೆ ಮಾರ್ಗವಾಗಿ ಚಿಕ್ಕಬಳ್ಳಾಪುರದಿಂದ ಚೇಳೂರಿಗೆ ಹೊರಟಿದ್ದ ಕೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ಸೋಮವಾರ ಸಂಜೆ ತಾಲೂಕಿನ ಅಮ್ಮಗಾರಹಳ್ಳಿ ಕ್ರಾಸ್ ಬಳಿ ನಡೆದಿದೆ.

Advertisement

ತಾಲೂಕಿನಲ್ಲಿ ಅಲ್ಲಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಸಂಹೆ ಸುಮಾರು 8 ಗಂಟೆ ಸುಮಾರಿನಲ್ಲಿ ವಿಪರೀತ ಮಳೆ ಬೀಳುವಾಗ ದಾರಿ ಕಾಣದೇ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಐದು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೂಡಲೇ ಆ್ಯಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಗ್ರಾಮಾಂತರ ಠಾಣೆಯ ಆರಕ್ಷಕ ವೃತ್ತ ಉಪ ನಿರೀಕ್ಷಕಿ ಶ್ಯಾಮಲ ಹಾಗೂ ಪಿಸಿ ಗಳಾದ ಕೃಷ್ಣ, ಚಂದ್ರಶೇಖರ್, ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಗಾಯಾಳುಗಳನ್ನ ಆಸ್ಪತ್ರೆಗೆ ಸಾಗಿಸಿದ್ದಾರೆ. ಪೊಲೀಸರು ಪ್ರಯಾಣಿಕರಿಗೆ ಬೇರೊಂದು ಬಸ್ಸಿನ ವ್ಯವಸ್ಥೆ ಮಾಡಿ ಸ್ವಗ್ರಾಮಗಳಿಗೆ ತೆರಳಲು ಅನವು ಮಾಡಿಕೊಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next