Advertisement

ಸಿಗಂದೂರು ದೇವಸ್ಥಾನ ಸಮಿತಿ ಹಿಂಪಡೆಯಬೇಕು: ಡಿಸಿಗೆ ಎಚ್ಚರಿಕೆ ನೀಡಿದ ಧರ್ಮದರ್ಶಿ ರಾಮಪ್ಪ

01:25 PM Oct 30, 2020 | keerthan |

ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಸ್ಥಾನದ ನಿರ್ವಹಣೆಗೆ ಸರ್ಕಾರ ರಚಿಸಿರುವ ಸಮಿತಿಯ ಮೊ    ದಲ ಸಭೆ ನಡೆದ ಬೆನ್ನಿಗೆ, ಧರ್ಮದರ್ಶಿ ರಾಮಪ್ಪ ಮೌನ ಮರಿದಿದ್ದಾರೆ. ಸಮಿತಿ ವಿಚಾರವಾಗಿ ಮೊದಲ ಬಾರಿಗೆ ಬಹಿರಂಗ ಹೇಳಿಕೆ ನೀಡಿದ್ದಾರೆ.

Advertisement

ಶಿವಮೊಗ್ಗದ ಈಡಿಗ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ರಾಮಪ್ಪ ಅವರು, ಸಮಿತಿಯನ್ನು ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿ ಈಡಿಗ ಸಮುದಾಯ ಪ್ರತಿಭಟಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ:ಮಲ್ಪೆ ಕಡಲ ಕಿನಾರೆ ಬಳಿ ಸಿದ್ದವಾಗುತ್ತಿದೆ ಸುಂದರ ಉದ್ಯಾನವನ, ಬಯಲು ರಂಗ ಮಂದಿರ

ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಯಾವುದೆ ಭ್ರಷ್ಟಾಚಾರವಾಗಿಲ್ಲ. ಹಿಂದುಳಿದ ವರ್ಗದ ದೇಗುಲ ಎಂಬ ಕಾರಣಕ್ಕೆ ಸಮಿತಿ ರಚನೆ ಮಾಡಿ ಸರ್ಕಾರ ಏನೋ ಕಂಟಕ ತರಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ರಾಮಪ್ಪ ಅವರು, ಸಮಿತಿಯನ್ನು ಹಿಂಪಡೆಯಬೇಕು ಎಂದು ಜಿಲ್ಲಾಧಿಕಾರಿ ಅವರಿಗೆ ಎಚ್ಚರಿಕೆ ನೀಡುತ್ತೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next