Advertisement
ಎಚ್ಎಎಲ್ ವಿಮಾನನಿಲ್ದಾಣ ರಸ್ತೆಯ ಸುರಂಜನ್ದಾಸ್ ರಸ್ತೆ ಜಂಕ್ಷನ್ನಿಂದ ಇಂದಿರಾನಗರದ 100 ಅಡಿ ರಸ್ತೆವರೆಗೆ ಸಿಗ್ನಲ್ ಮುಕ್ತ ಸಂಚಾರ ವ್ಯವಸ್ಥೆ ಕಲ್ಪಿಸುವ ಯೋಜನೆ ಸಂಬಂಧ ಮಂಗಳವಾರ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಹಳೆ ವಿಮಾನನಿಲ್ದಾಣ ರಸ್ತೆ ಹಾಗೂ ಹಳೆ ಮದ್ರಾಸ್ ರಸ್ತೆಗಳಲ್ಲಿ ದಿನ ಕಳೆದಂತೆ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 2014ರಲ್ಲಿ ಸುಮಾರು 275 ಕೋಟಿ ರೂ. ವೆಚ್ಚದಲ್ಲಿ 33 ಕಿ.ಮೀ. ಉದ್ದದ ಸಿಗ್ನಲ್ ಮುಕ್ತ ಕಾರಿಡಾರ್ ಯೋಜನೆ ಕೈಗೆತ್ತಿಕೊಂಡು ಕಾರ್ಯಾದೇಶ ನೀಡಲಾಗಿತ್ತು.
Related Articles
Advertisement
ಕುಂದಲಹಳ್ಳಿ ಬಳಿ ಪರಿಶೀಲನೆ ವೇಳೆ ದೊಡ್ಡನೆಕ್ಕುಂದಿ ವಾರ್ಡ್ ಸದಸ್ಯೆ ಶ್ವೇತಾ ವಿಜಯಕುಮಾರ್ ಹಾಗೂ ಸ್ಥಳೀಯರು ತೂಬರಹಳ್ಳಿಯ ವಿಬ್ಗಯಾರ್ ಶಾಲೆಗೆ ಸಂಪರ್ಕಿಸುವ ರಸ್ತೆಯನ್ನು 10 ವರ್ಷಗಳಿಂದ ಅಭಿವೃದ್ಧಿಪಡಿಸಿಲ್ಲ ಎಂದು ಸಚಿವ ಜಾರ್ಜ್ ಅವರಿಗೆ ದೂರು ನೀಡಿದರು. ಇದಕ್ಕೆ ಸ್ಪಂದಿಸಿದ ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾತನಾಡಿ, ಸುಮಾರು ಒಂದು ಕಿ.ಮೀ. ರಸ್ತೆ ಅಭಿವೃದ್ಧಿಗೆ ನಾಲ್ಕು ಮಂದಿ ಭೂಮಾಲೀಕರು ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ.
ಹೀಗಾಗಿ ಅಭಿವೃದ್ಧಿಪಡಿಸಲು ಸಾಧ್ಯವಾಗಿಲ್ಲ ಎಂದರು. ಶೀಘ್ರವೇ ತಡೆಯಾಜ್ಞೆ ತೆರವಿಗೆ ಪ್ರಯತ್ನಿಸುವ ಮೂಲಕ ಟಿಡಿಆರ್ನಡಿ ಪರಿಹಾರ ನೀಡಿ ಭೂಸ್ವಾಧೀನಪಡಿಸಿಕೊಳ್ಳುವಂತೆ ಸೂಚನೆ ನೀಡಿದರು. ಮೇಯರ್ ಜಿ.ಪದ್ಮಾವತಿ, ಉಪಮೇಯರ್ ಆನಂದ್, ಶಾಸಕ ಎಸ್.ರಘು, ಆಯುಕ್ತ ಎನ್.ಮಂಜುನಾಥ್ ಇತರರು ಉಪಸ್ಥಿತರಿದ್ದರು.