Advertisement

ಸಾರ್ವಜನಿಕ ಗ್ರಂಥಾಲಯಕ್ಕೆ ಒತ್ತಾಯಿಸಿ ಸಹಿ ಸಂಗ್ರಹ ಚಳವಳಿ

02:38 PM Dec 13, 2019 | Team Udayavani |

ಮಳವಳ್ಳಿ: ಪಟ್ಟಣದಲ್ಲಿ ಸುಸಜ್ಜಿತ ಸಾರ್ವಜನಿಕ ಗ್ರಂಥಾಲಯಕ್ಕೆ ಒತ್ತಾಯಿಸಿ ಸಹಿ ಸಂಗ್ರಹ ಚಳವಳಿ ಕಾರ್ಯಕ್ರಮ ಸಾರಿಗೆ ಬಸ್‌ ನಿಲ್ದಾಣದ ಆವರಣದಲ್ಲಿ ನಡೆಯಿತು.

Advertisement

ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಭರತ್‌ರಾಜ್‌ ಮಾತನಾಡಿ, ಮಳವಳ್ಳಿ ತಾಲೂಕು ತನ್ನದೇ ಆದ ಇತಿಹಾಸ ಹೊಂದಿದೆ. ಶ್ರೀ ಮಹದೇಶ್ವರ, ಶ್ರೀ ಮಂಟೇಸ್ವಾಮಿ ಶ್ರೀಸಿದ್ದಪ್ಪಾಜಿಯವರು ನಡೆದಾಡಿರುವ ಸ್ಥಳವಾಗಿದೆ. ಹಲವಾರು ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿ ಹೆಸರು ಮಾಡಿರುವ ತಾಲೂಕಿನಲ್ಲಿ ಸುಸಜ್ಜಿತ ಗ್ರಂಥಾಲಯ ಇಲ್ಲದಿರುವುದು ವಿಷಾದನೀಯ ಎಂದು ಹೇಳಿದರು.

ಈಗಾಗಲೇ ಇರುವ ಗ್ರಂಥಾಲಯದಲ್ಲಿ ವಿದ್ಯುತ್‌ ಸೇರಿದಂತೆ ಯಾವುದೇ ಮೂಲ ಸೌಲಭ್ಯಗಳಿಲ್ಲ.ಯಾವುದೇ ಇತಿಹಾಸಕ್ಕೆ ಸಂಬಂಧಿಸಿದ ಪುಸ್ತಕಗಳಿಲ್ಲ, ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಈ ಬಗ್ಗೆ ಕ್ರಮ ಕೈಗೊಂಡು ಕೂಡಲೇ ಸುಸಜ್ಜಿತ ಗ್ರಂಥಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದೇ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಕೆಂಪಯ್ಯ, ಬಸಪ್ಪ ನೆಲಮಾಕನಹಳ್ಳಿ, ಮ.ಸಿ. ನಾರಾಯಣ್‌, ಮೆಹಭೂಬ್‌ ಪಾಷಾ, ಜಯರಾಜು ಮೊದಲಾದವರು ಸಹಿ ಹಾಕಿ ಸಹಿ ಸಂಗ್ರಹ ಚಳವಳಿಗೆ ಬೆಂಬಲ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next