Advertisement

ಕೊಲ್ಲೂರು ಮೂಕಾಂಬಿಕೆಗೆ ಬೆಳ್ಳಿ ಶರಭ ಕೊಡುಗೆ

01:27 AM Mar 26, 2019 | Team Udayavani |

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಕಾಣಿಕೆ ರೂಪದಲ್ಲಿ ಭಕ್ತರೋರ್ವರು ಸಮರ್ಪಿಸಿದ 10 ಲಕ್ಷ ರೂ. ಮೌಲ್ಯದ ಬೆಳ್ಳಿ ಶರಭ ವಾಹನ ಸಮರ್ಪಣೆ ಸೋಮವಾರ ಸಂಜೆ ನಡೆಯಿತು.

Advertisement

ತಮಿಳುನಾಡಿನ ವೆಟ್ರಿಸೆಲ್ವನ್‌ ನೀಡಿರುವ 12 ಕೆ.ಜಿ. ತೂಕದ ಬೆಳ್ಳಿ ಶರಭವನ್ನು ಶ್ರೀ ದೇವಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯನಿರ್ವಹಣಾಧಿಕಾರಿ ಎಚ್‌. ಹಾಲಪ್ಪ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್‌ಕುಮಾರ್‌ ಶೆಟ್ಟಿ, ಉಪಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಸಮಿತಿಯ ಸದಸ್ಯರಾದ ರಮೇಶ್‌ ಗಾಣಿಗೆ ಕೊಲ್ಲೂರು, ನರಸಿಂಹ ಹಳಗೇರಿ, ದೇಗುಲದ ಅರ್ಚಕರಾದ ರಾಮಚಂದ್ರ ಅಡಿಗ, ಡಾ| ಕೆ.ಎನ್‌. ನರಸಿಂಹ ಅಡಿಗ, ಅಧೀಕ್ಷಕ ರಾಮಕೃಷ್ಣ ಅಡಿಗ, ಸುಬ್ರಹ್ಮಣ್ಯ ಅಡಿಗ, ದೇಗುಲದ ಪಿಆರ್‌ಒ ಜಯಕುಮಾರ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next