Advertisement

Sindhanur: ಬಸ್ ಗಳು ಅಪಘಾತ; ಓರ್ವ ಸಾವು; ಹಲವರಿಗೆ ಗಾಯ

02:36 PM Sep 08, 2024 | Team Udayavani |

ಸಿಂಧನೂರು: ಸರಕಾರಿ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾದ ಘಟನೆ ತಾಲೂಕಿನ ಹಾರಾಪುರ ಗ್ರಾಮದ ಬಳಿ  ಹೆದ್ದಾರಿಯಲ್ಲಿ ಸೆ.8ರ ಭಾನುವಾರ ಬೆಳಗ್ಗೆ ನಡೆದಿದೆ.

Advertisement

ಖಾಸಗಿ ಟ್ರಾವೆಲ್ಸ್ ನಿರ್ವಾಹಕ ಪುಂಡಲೀಕ (37) ಮೃತರು.

ಸರಕಾರಿ ಬಸ್ ಚಾಲಕ ಸೇರಿ 9 ಜನರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಯಾದಗಿರಿಗೆ ಹೊರಟಿದ್ದ ಸರಕಾರಿ ಬಸ್  ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ ಪ್ರಯಾಣಿಕರೊಬ್ಬರನ್ನು ಇಳಿಸಲು ಚಾಲಕ ಹಾರಾಪುರದಲ್ಲಿ ನಿಲ್ಲಿಸಿದ್ದಾನೆ. ಇದೇ ಸಮಯದಲ್ಲಿ ಕಲಬುರಗಿ ಕಡೆ ಹೊರಟಿದ್ದ ಖಾಸಗಿ ಟ್ರಾವೆಲ್ಸ್‌ನ ಬಸ್, ಸಾರಿಗೆ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಸಾರಿಗೆ ಬಸ್ ರಸ್ತೆ ಬದಿ ಉರುಳಿದ್ದು, ಹಿಂಬದಿ ಜಖಂಗೊಂಡಿದೆ. ಖಾಸಗಿ ಟ್ರಾವೆಲ್ಸ್ ಬಸ್ ಮುಂಬದಿ ನಜ್ಜುಗುಜ್ಜಾಗಿದೆ.

Advertisement

ಈ ಕುರಿತು ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಪಿಐ ವೀರಾರೆಡ್ಡಿ.ಹೆಚ್, ಪಿಎಸ್ ಐ ಸುಜಾತಾ ತನಿಖೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next