Advertisement

ಅಂತರ ಮರೆತ ಜನಪ್ರತಿನಿಧಿಗಳು- ಅಧಿಕಾರಿಗಳು

05:07 PM Apr 19, 2020 | Team Udayavani |

ಸಿಂಧನೂರು: ಸಾಮಾಜಿಕ ಅಂತರ ಕಾಪಾಡಿಕೊಂಡು ಕೋವಿಡ್  ರೋಗ ನಿರ್ಮೂಲನೆಗೆ ಜಾಗೃತಿ ಮೂಡಿಸಲಾಗುತ್ತಿದೆ. ಆದರೆ ನಗರದಲ್ಲಿ ಶನಿವಾರ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವ ಸಂಗತಿ ಕಂಡು ಬಂತು.

Advertisement

ಸಂಸದ ಸಂಗಣ್ಣ ಕರಡಿ ಹಾಗೂ ಶಾಸಕ ವೆಂಕಟರಾವ್‌ ನಾಡಗೌಡ ಅವರ ನೇತೃತ್ವದಲ್ಲಿ ತಾಲೂಕಿನ ಜಾಲಿಹಾಳ ಹೋಬಳಿ ವ್ಯಾಪ್ತಿಯಲ್ಲಿ ಭತ್ತದ ಬೆಳೆ ಸಮೀಕ್ಷೆಗೆ ಹೋದ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಸಾರ್ವಜನಿಕರ ಎದುರು ಮಾತನಾಡುತ್ತಿರುವುದು ಕಂಡು ಬಂತು.

ತುಂಗಾಭದ್ರಾ ಕಾಡಾ ಅಧ್ಯಕ್ಷರು, ಜಿಪಂ ಸದಸ್ಯರು, ತಹಶೀಲ್ದಾರ್‌ ಡಿಎಸ್‌ಪಿ, ಕೃಷಿ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಪ್ರಜ್ಞಾವಂತರ ಕೆಂಗಣ್ಣಿಗೆ ಗುರಿಯಾಗುವಂತಾಯಿತು.

Advertisement

Udayavani is now on Telegram. Click here to join our channel and stay updated with the latest news.

Next