Advertisement

ದ.ಕ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಅವರಿಗೆ ಕೊಲೆ ಬೆದರಿಕೆ; ಆರೋಪಿ ಬಂಧನ

12:23 PM Jul 29, 2020 | Mithun PG |

ಮಂಗಳೂರು: ದಕ್ಷಿಣ ಕನ್ನಡ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಿದ ಹಿನ್ನಲೆ ಓರ್ವ ಯುವಕನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

Advertisement

ಬಂಧಿತ ಆರೋಪಿಯನ್ನು ಬಡಗು ಮಿಜಾರು ನಿವಾಸಿ  ರಂಜಿತ್ ಎಂದು ಗುರುತಿಸಲಾಗಿದೆ.

ಅಕ್ರಮ/ ಅನಧಿಕೃತವಾಗಿ ಜಾನುವಾರು ಸಾಗಾಣಿಕೆ ಮಾಡುವ ಸಂದರ್ಭ ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳದೆ ಸಂಬಂಧಪಟ್ಟ ಪೊಲೀಸ್‌ ಠಾಣೆಗೆ ಮಾಹಿತಿ ನೀಡಬೇಕು. ಕಾನೂನನ್ನು ಉಲ್ಲಂಘಿಸಿ ಜಾನುವಾರು ಸಾಗಾಣಿಕೆ ಮಾಡುವ ವಾಹನ ಅಥವಾ ಜನರ ಮೇಲೆ ಹಲ್ಲೆ ನಡೆಸಿದ್ದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದರು.

ಇದರಿಂದ ಸಾಮಾಜಿಕ ಜಾಲತಾಣದಲ್ಲಿ ಸಿಂಧೂ.ಬಿ.ರೂಪೇಶ್ ಅವರಿಗೆ ಕೊಲೆ ಬೆದರಿಕೆ  ಹಾಕಲಾಗಿತ್ತು. ಈ ಹಿನ್ನಲೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಮೂಡಬಿದಿರೆ ಪೊಲೀಸರು ಆರೋಪಿಯನ್ನು ಬಂಧಿಸಿ  ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next