Advertisement

ಗಾಯಕಿ ವಸುಂಧರಾ ದಾಸ್‌ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದನೆ 

11:30 AM Nov 02, 2018 | |

ಬೆಂಗಳೂರು: ಖ್ಯಾತ ಗಾಯಕಿ, ನಟಿ ವಸುಂಧರಾ ದಾಸ್‌ ಅವರ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿದೆ.

Advertisement

ಮಲ್ಲೇಶ್ವರಂನ 18 ನೇ ಕ್ರಾಸ್‌ನಲ್ಲಿ ಅಕ್ಟೋಬರ್‌ 29 ರಂದು ಸಂಜೆ 4.30 ರ ವೇಳೆಗೆ ಘಟನೆ ನಡೆದಿದ್ದು, ಕ್ಯಾಬ್‌ ಚಾಲಕನೊಬ್ಬ ದಾರಿ ಬಿಟ್ಟುಕೊಡಲಿಲ್ಲ ಎಂಬ ಕಾರಣಕ್ಕೆ ವಸುಂಧರಾ ಅವರ ಕಾರನ್ನು ಬೆನ್ನಟ್ಟಿ ದ್ದು ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. 

ವಸುಂಧರಾ ದಾಸ್‌ ಅವರೊಡನೆ ತೀವ್ರ ವಾಗ್ವಾದ ನಡೆಸಿದ್ದು, ಈ ವೇಳೆ ಸಾರ್ವಜನಿಕರು ಜಮಾವಣೆಗೊಂಡಿದ್ದಾರೆ.  ಅಷ್ಟರಲ್ಲಾಗಲೇ ಕ್ಯಾಬ್‌ ಚಾಲಕ ಸ್ಥಳದಿಂದ ತೆರಳಿದ್ದಾನೆ ಎಂದು ಹೇಳಿದ್ದಾರೆ. 

ಈ ಬಗ್ಗೆ ವಸುಂಧರಾ ದಾಸ್‌ ಅವರು ಮಲ್ಲೇಶ್ವರಂ ಠಾಣೆಗೆ ದೂರು ನೀಡಿದ್ದಾರೆ. 

ಸೆಕ್ಷನ್‌ 509 341,364 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕ್ಯಾಬ್‌ ಚಾಲಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next