Advertisement

ಕಲಾಪ ; ಪ್ರಮಾಣವಚನ ಸ್ವೀಕರಿಸಿದ ಸಿಂಗ್, ಪ್ರತಾಪ್ ಗೌಡ

03:39 PM May 19, 2018 | Team Udayavani |

ಬೆಂಗಳೂರು: ವಿಧಾನಸಭಾ ಕಲಾಪ ಮತ್ತೆ ಪುನರಾರಂಭಗೊಂಡಿದ್ದು, ಬಳ್ಳಾರಿ ಜಿಲ್ಲೆಯ ವಿಜಯನಗರ ಶಾಸಕ ಆನಂದ್ ಸಿಂಗ್ ಹಾಗೂ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಕೂಡಾ ವಿಧಾನಸೌಧಕ್ಕೆ ಆಗಮಿಸಿದ್ದಾರೆ.ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರು ಬಾಕಿ ಉಳಿದ ನೂತನ ಶಾಸಕರಿಗೆ ಪ್ರಮಾಣವಚನ ಬೋಧಿಸಿದರು. 

Advertisement

ಮೊದಲು ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ವಿಧಾನಸೌಧಕ್ಕೆ ಕರೆತಂದಿದ್ದರೆ, ಬಳಿಕ ವಿಜಯನಗರ ಶಾಸಕ ಆನಂದ್ ಸಿಂಗ್ ಅವರು ಕುಟುಂಬ ಸಮೇತರಾಗಿ ಎಸ್ ಜಿಪಿ ಭದ್ರತೆಯಲ್ಲಿ ವಿಧಾನಸೌಧಕ್ಕೆ ಬಂದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next