Advertisement

Election: ಏಕ ಚುನಾವಣೆ: ಸಲಹೆ ಆಹ್ವಾನಿಸಿದ ಕೋವಿಂದ್‌ ಸಮಿತಿ

11:54 PM Sep 23, 2023 | Team Udayavani |

ನವದೆಹಲಿ: ವಿಧಾನಸಭೆಗಳಿಗೆ ಮತ್ತು ಲೋಕಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಮಾನ್ಯತೆ ಪಡೆದ ರಾಜ್ಯ, ರಾಷ್ಟ್ರೀಯ ಪಕ್ಷಗಳಿಂದ ಸಲಹೆ ಆಹ್ವಾನಿಸಲಾಗಿದೆ. ಜತೆಗೆ ಕಾನೂನು ಆಯೋಗ ಕೂಡ ಸಲಹೆ ನೀಡಲು ಮನವಿ ಮಾಡಲಾಗಿದೆ. ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ನೇತೃತ್ವದ ಸಮಿತಿಯ ಮೊದಲ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಶೀಘ್ರವೇ ಅದು ಅಭಿಪ್ರಾಯ ಸಂಗ್ರಹಿಸಿ ಕೇಂದ್ರಕ್ಕೆ ವರದಿ ಸಲ್ಲಿಸಲಿದೆ. ಅದಕ್ಕೆ ಈ ಬಗ್ಗೆ ಕಾಲಮಿತಿ ನಿಗದಿಪಡಿಸಲಾಗಿಲ್ಲ.

Advertisement

ಸಚಿವರಾದ ಅಮಿತ್‌ ಶಾ, ಅರ್ಜುನ್‌ ರಾಮ್‌ ಮೇಘ್ವಾಲ್‌, ರಾಜ್ಯಸಭೆ ಮಾಜಿ ಸದಸ್ಯ ಗುಲಾಮ್‌ ನಬಿ ಆಜಾದ್‌, 15ನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‌.ಕೆ.ಸಿಂಗ್‌, ಲೋಕಸಭೆಯ ನಿವೃತ್ತ ಸೆಕ್ರೆಟರಿ ಜನರಲ್‌ ಸುಭಾಷ್‌ ಸಿ. ಕಶ್ಯಪ್‌, ನಿವೃತ್ತ ಸಿವಿಸಿ ಸಂಜಯ ಕೊಠಾರಿ ಭಾಗವಹಿಸಿದ್ದರು. ನ್ಯಾಯವಾದಿ ಹರೀಶ್‌ ಸಾಳ್ವೆ ಆನ್‌ಲೈನ್‌ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next