Advertisement

ಅಂತೂ ಇಂತೂ ಬಸ್‌ ನಿಲ್ದಾಣ ರೆಡಿ

04:58 PM Jan 06, 2021 | Team Udayavani |

ಸಿರಗುಪ್ಪ: ನಗರದ ಹೃದಯಭಾಗದಲ್ಲಿ ಮೂರು ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಬಸ್‌ ನಿಲ್ದಾಣದಕಾಮಗಾರಿ ಅಂತೂ ಇಂತೂ ಮುಗಿಯುತ್ತಾ ಬಂದಿದ್ದು ಇನ್ನೊಂದು ತಿಂಗಳೊಳಗೆ ಬಸ್‌ನಿಲ್ದಾಣ ಸಾರ್ವಜನಿಕರ ಸೇವೆಗೆ ಸಿಗಲಿದೆ.

Advertisement

ರೂ. 2.50 ಕೋಟಿ ವೆಚ್ಚದಲ್ಲಿ ಕೇಂದ್ರ ಬಸ್‌ನಿಲ್ದಾಣದ ಕಾಮಗಾರಿಗೆ ಅಂದಿನ ಸಾರಿಗೆ ಸಚಿವ ಎಚ್‌.ಎಂ. ರೇವಣ್ಣ ಮಾ. 13, 2018ರಂದು ಭೂಮಿಪೂಜೆನೆರವೇರಿಸಿದ್ದರು. ಆದರೆ ನಿಲ್ದಾಣದ ಕಾಮಗಾರಿ ಕೆಲಸಮಾತ್ರ ಆಮೆಗತಿಯಲ್ಲಿ ಸಾಗುತ್ತಿದ್ದರಿಂದ ಮೂರುವರ್ಷಕ್ಕೆ ಮುಗಿಯುವ ಹಂತ ತಲುಪಿದೆ.ನಗರದಲ್ಲಿ ಹೈಟೆಕ್‌ ಬಸ್‌ ನಿಲ್ದಾಣ ನಿರ್ಮಾಣ ಮಾಡಬೇಕೆಂದು ಶಾಸಕ ಬಿ.ಎಂ. ನಾಗರಾಜ ಶಥಪ್ರಯತ್ನ ಮಾಡಿ ಸರ್ಕಾರದ ಮಟ್ಟದಲ್ಲಅಧಿಕಾರಿಗಳೊಂದಿಗೆ ಚರ್ಚಿಸಿ ರೂ. 2.50 ಕೋಟಿ ವೆಚ್ಚದಲ್ಲಿ ಬಸ್‌ನಿಲ್ದಾಣ ಯೋಜನೆ ಕಾಮಗಾರಿಗೆ ಅನುಮೋದನೆ ಕೊಡಿಸಿ ನಿರ್ಮಾಣ ಕಾಮಗಾರಿಗೆ ಅಂದಿನ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದ ಹೆಚ್‌. ಎಂ.ರೇವಣ್ಣರನ್ನು ಕರೆಸಿ ಭೂಮಿಪೂಜೆ ನೆರವೇರಿಸಿ 18 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ತಿಳಿಸಿದ್ದರು.

ಭೂಮಿಪೂಜೆ ನಂತರ ವಿಧಾನಸಭೆ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ನಿರ್ಮಾಣಕಾಮಗಾರಿ ತಡವಾಗಿ ಪ್ರಾರಂಭವಾಯಿತು. ನೂತನಶಾಸಕರಾಗಿ ಆಯ್ಕೆಯಾದ ಶಾಸಕ ಎಂ.ಎಸ್‌.ಸೋಮಲಿಂಗಪ್ಪ ಬಸ್‌ನಿಲ್ದಾಣದ ಕಾಮಗಾರಿಯನ್ನುತ್ವರಿತವಾಗಿ ಮುಗಿಸಿಕೊಡಬೇಕೆಂದು ಗುತ್ತಿಗೆದಾರರಿಗೆತಾಕೀತು ಮಾಡಿದರು. ಆದರೂ ಮೊದಲ ಹಂತದಕಾಮಗಾರಿ ಮಾಡಿದ ಗುತ್ತಿಗೆದಾರರಿಗೆ ಸರ್ಕಾರದಿಂದ ಸಕಾಲಕ್ಕೆ ಬಿಲ್‌ ಪಾವತಿಯಾಗದ ಕಾರಣ ಬಸ್‌ನಿಲ್ದಾಣದ ಕಾಮಗಾರಿಯು ಕೆಲವು ತಿಂಗಳು ಸ್ಥಗಿತಗೊಂಡಿತ್ತು.

ಬಸ್‌ನಿಲ್ದಾಣದ ಕಾಮಗಾರಿ ತ್ವರಿತವಾಗಿ ಮುಗಿಯದೇ ಇರುವುದರಿಂದ ಬಸ್‌ಗಾಗಿ ಕಾಯುವ ಪ್ರಯಾಣಿಕರು ರಸ್ತೆಯಲ್ಲಿಯೇ ನಿಂತು ಬಸ್‌ ಹತ್ತಬೇಕಾಗಿದ್ದರಿಂದ ಬಸ್‌ನಿಲ್ದಾಣದ ಸಮೀಪ ನಿರಂತರವಾಗಿ ಟ್ರಾಫಿಕ್‌ ಜಾಮ್‌ ಉಂಟಾಗಿ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುವುದನ್ನು ಗಮನಿಸಿದ ಶಾಸಕರು ಶೀಘ್ರವಾಗಿ ಕಾಮಗಾರಿಯನ್ನುಮುಗಿಸಬೇಕೆಂದು ತಾಕೀತು ಮಾಡಿದ್ದರೂ ಮೂರುವರ್ಷ ಕಾಲಾವ ಧಿಯಲ್ಲಿ ನಿಲ್ದಾಣದ ಕಾಮಗಾರಿ ಮುಗಿದಿದ್ದು ಉದ್ಘಾಟನೆಗೆ ಸಿದ್ಧವಾಗುತ್ತಿದೆ.

ಬಸ್‌ನಿಲ್ದಾಣದ ಕಾಮಗಾರಿ ಮುಗಿಯುತ್ತಿದ್ದರೂ ಅಧಿಕಾರಿಗಳು ನಿಲ್ದಾಣವನ್ನು ಲೋಕಾರ್ಪಣೆ ಮಾಡಲುಇನ್ನೂ ತಡಮಾಡುತ್ತಿರುವುದು ಸರಿಯಾದಕ್ರಮವಲ್ಲ. ಶೀಘ್ರವಾಗಿ ಬಸ್‌ನಿಲ್ದಾಣ ಲೋಕಾರ್ಪಣೆ ಮಾಡಲು ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. – ಪ್ರಯಾಣಿಕರು

Advertisement

ಸಣ್ಣಪುಟ್ಟ ಕಾಮಗಾರಿಗಳು ಬಾಕಿ ಇದ್ದು, ವಿಭಾಗೀಯ ಅಧಿಕಾರಿಗಳು ಬಂದುತಪಾಸಣೆ ನಡೆಸಿದ ನಂತರ ಬಸ್‌ನಿಲ್ದಾಣ ಲೋಕಾರ್ಪಣೆ ಮಾಡಲು ನಮ್ಮ ಇಲಾಖೆ ಮೇಲಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. – ವಸಂತ್‌, ಎಇಇ, ಕೆಎಸ್‌ಆರ್‌ಟಿಸಿ ಕಾಮಗಾರಿ ವಿಭಾಗ

 

-ಆರ್‌. ಬಸವರೆಡ್ಡಿ ಕರೂರು

Advertisement

Udayavani is now on Telegram. Click here to join our channel and stay updated with the latest news.

Next